ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಚರ್ಚ್ ದಾಳಿ: ಸರ್ಕಾರಕ್ಕೆ ಶೀಘ್ರವೇ ಮಧ್ಯಂತರ ವರದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಚರ್ಚ್ ದಾಳಿ: ಸರ್ಕಾರಕ್ಕೆ ಶೀಘ್ರವೇ ಮಧ್ಯಂತರ ವರದಿ
ಚರ್ಚ್ ಮೇಲಿನ ದಾಳಿ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ನೇಮಕಗೊಂಡಿರುವ ನ್ಯಾಯಮೂರ್ತಿ ಬಿ.ಕೆ. ಸೋಮಶೇಖರ ನೇತೃತ್ವದ ಆಯೋಗವು ಸರ್ಕಾರಕ್ಕೆ ಶೀಘ್ರವೇ ಮಧ್ಯಂತರ ವರದಿ ನೀಡಲು ನಿರ್ಧರಿಸಿದೆ.

ಈ ವಿಷಯವನ್ನು ಸ್ಪಷ್ಟಪಡಿಸಿದ ಬಿ.ಕೆ. ಸೋಮಶೇಖರ, ರಾಜ್ಯದ ಹಲವೆಡೆ ನಡೆದ ಚರ್ಚ್ ಮೇಲಿನ ದಾಳಿಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಪ್ರಗತಿಯಲ್ಲಿದೆ. ಈಗಾಗಲೇ ಸುಮಾರು 250ಕ್ಕೂ ಹೆಚ್ಚು ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಆಯೋಗವು ಡಿಸೆಂಬರ್ ಅಂತ್ಯದೊಳಗೆ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ನೀಡಲಿದೆ ಎಂದು ತಿಳಿಸಿದ್ದಾರೆ.

ನಗರದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆಯೋಗವು ನಿಗದಿತ ಅವಧಿಯಲ್ಲಿ ವರದಿ ಪೂರ್ಣಗೊಳಿಸಲು ನಿರ್ಧರಿದ್ದು, ತನಿಖೆಯ ಮೊದಲ ಮಧ್ಯಂತರ ವರದಿಯನ್ನು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸಲು ಉದ್ದೇಶಿಸಿದೆ ಎಂದು ಹೇಳಿದ್ದಾರೆ.

ಆಯೋಗವು ಚರ್ಚ್ ಮೇಲಿನ ದಾಳಿಯ ಹಿನ್ನೆಲೆಯಲ್ಲಿ ಧರ್ಮ ಮತ್ತು ಕಾನೂನು ವಿಷಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮುಂದಾಗಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ ನ್ಯಾಯಾಂಗ ತನಿಖೆಗೆ ನೇಮಕಗೊಂಡ ಆಯೋಗವೊಂದು ಈ ರೀತಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದೆ ಎಂದು ಅವರು ತಿಳಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬೆಂಗಳೂರಲ್ಲಿ ತಿರುವಳ್ಳುವರ್: ಆ.9ರಂದು ಕರುಣಾ ಉದ್ಘಾಟನೆ
ಶಾಸಕ-ಸಚಿವರ ಗಲಾಟೆ: ವರದಿ ಕೇಳಿದ ಡಿವಿ
ಯೂರಿಯಾ ಕೋರಿ ಕೇಂದ್ರಕ್ಕೆ ಪತ್ರ: ಯಡಿಯೂರಪ್ಪ
ಧರ್ಮುಗೆ ಕ್ಲೀನ್‌ಚಿಟ್ ನೀಡಿ ತೆರಳಿದ ಠಾಕೂರ್!
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷರಾಗಿ ಪುಟ್ಟೇಗೌಡ
ಮೈಸೂರು ಗಲಭೆ ಹಿಂದೆ ಸಂಘಪರಿವಾರ: ಎಚ್‌ಡಿಕೆ