ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಗೋಹತ್ಯೆ ಸಂಪೂರ್ಣ ನಿಷೇಧಕ್ಕೆ ಬದ್ಧ: ಆಚಾರ್ಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗೋಹತ್ಯೆ ಸಂಪೂರ್ಣ ನಿಷೇಧಕ್ಕೆ ಬದ್ಧ: ಆಚಾರ್ಯ
ರಾಜ್ಯದಲ್ಲಿ ಗೋಹತ್ಯೆ ಸಂಪೂರ್ಣ ನಿಷೇಧ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಗೃಹ ಸಚಿವ ವಿ.ಎಸ್. ಆಚಾರ್ಯ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಖಾಸಗಿ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು, ಕಾನೂನು ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಸಮ್ಮತಿಯನ್ನು ಈ ವಾರದೊಳಗೆ ಪಡೆದುಕೊಳ್ಳುವ ಪ್ರಯತ್ನ ನಡೆಸುವುದಾಗಿ ಹೇಳಿದರು.

ರಾಜ್ಯದಲ್ಲಿ ಈಗಾಗಲೇ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೆ ಕಾನೂನನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲಾಗುತ್ತಿಲ್ಲ. ಗೋವುಗಳ ಸಾಗಾಣಿಕೆ ಆಗುತ್ತಿರುವ ವಿಚಾರ ನನ್ನ ಗಮನಕ್ಕೂ ಬಂದಿದೆ. ಹಾಗಾಗಿಯೇ ಹೊಸ ಕಾಯ್ದೆ ರೂಪಿಸುವ ಯೋಚನೆ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಕಾನೂನು ಇಲಾಖೆ, ಗೃಹ ಇಲಾಖೆ ಮತ್ತು ಪಶು ಸಂಗೋಪನೆ ಇಲಾಖೆ ಜೊತೆಗೂಡಿ ಈಗಾಗಲೇ ಕರಡು ಪ್ರತಿಯೊಂದನ್ನು ಸಿದ್ಧಪಡಿಸಿದೆ. ಎಲ್ಲಾ ಇಲಾಖೆಗಳು ಸಹಿ ಮಾಡಿ ಇದನ್ನು ಮುಖ್ಯಮಂತ್ರಿಗಳಿಗೆ ಒಪ್ಪಿಸಲಿದ್ದು, ಮುಂದಿನ ವಾರದೊಳಗೆ ಮಂಜುರಾತಿ ಪಡೆದುಕೊಳ್ಳುವ ಪ್ರಯತ್ನ ಮಾಡುತ್ತೇವೆ. ಇದಕ್ಕೆ ವಿರೋಧ ಪಕ್ಷಗಳ ಬೆಂಬಲವು ಬೇಕಿದೆ ಎಂದು ಅವರು ಮನವಿ ಮಾಡಿದರು.

ಇದೇ ವೇಳೆ ಮಾತನಾಡಿದ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದರು, ಸರ್ಕಾರ ನಿರ್ಭಯವಾಗಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲಿ, ಯಾವ ಪಕ್ಷಗಳಿಗೂ ಇದನ್ನು ವಿರೋಧಿಸುವ ಹಕ್ಕಿಲ್ಲ. ಇದಕ್ಕೆ ಎಲ್ಲಾ ರಾಜಕೀಯ ಪಕ್ಷಗಳೂ ಒಂದಾಗಬೇಕೆಂದು ಕರೆ ನೀಡಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಉಪಚುನಾವಣೆ; ಖರ್ಗೆ, ಕೃಷ್ಣಪ್ಪ ಪುತ್ರರಿಗೆ ಟಿಕೆಟ್
2 ವರ್ಷಗಳಲ್ಲಿ 947 ಮರಗಳಿಗೆ ಕೊಡಲಿ: ಯಡಿಯೂರಪ್ಪ
ಭ್ರಷ್ಟರ ವಿರುದ್ಧ ಮುಲಾಜಿಲ್ಲದೆ ಕ್ರಮ: ಯಡಿಯೂರಪ್ಪ
ಇಸ್ಕಾನ್ ಅವ್ಯವಹಾರ ತನಿಖೆಗೆ ಸದನ ಸಮಿತಿ
ಬುದ್ಧಿಗೆ ಗ್ರಹಣ; ಮೂಢನಂಬಿಕೆ ಸಹಿಸೋಲ್ಲ-ಸಿಎಂ
ಬಿಬಿಎಂಪಿ ಚುನಾವಣೆ 2 ತಿಂಗಳು ಮುಂದಕ್ಕೆ