ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ವಿದ್ಯುತ್ ಕೊರತೆ ಮುಕ್ತ ರಾಜ್ಯಕ್ಕಾಗಿ ಪಣ: ಈಶ್ವರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿದ್ಯುತ್ ಕೊರತೆ ಮುಕ್ತ ರಾಜ್ಯಕ್ಕಾಗಿ ಪಣ: ಈಶ್ವರಪ್ಪ
ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯವನ್ನು ವಿದ್ಯುತ್ ಕೊರತೆ ಮುಕ್ತ ರಾಜ್ಯವನ್ನಾಗಿ ಮಾಡಲು ಪಣ ತೊಡಲಾಗಿದೆ ಎಂದು ಇಂಧನ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಬಿಜಾಪುರ ಮತ್ತು ಬಾಗಲಕೋಟೆ ವಿದ್ಯುತ್ ಸಮಸ್ಯೆ ಕುರಿತು ನಡೆಸಿದ ಚರ್ಚೆಗೆ ಉತ್ತರ ನೀಡಿದ ಅವರು, ವಿದ್ಯುತ್ ಉತ್ಪಾದನೆ ಮಾಡುವ ಉತ್ತರ ಕನ್ನಡ, ಬಿಜಾಪುರ, ಶಿವಮೊಗ್ಗ ಮತ್ತು ರಾಯಚೂರು ಜಿಲ್ಲೆಗಳಿಗೆ 24 ಗಂಟೆಗಳ ಕಾಲ ವಿದ್ಯುತ್ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಪ್ರಸ್ತುತ 7 ಸಾವಿರ ಮೆಗವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. 10 ಸಾವಿರ ಮೆಗಾವ್ಯಾಟ್ ವಿದ್ಯುತ್ ಕೊರತೆಯಿದೆ. ಇದನ್ನು ತುಂಬಲು ರಾಜ್ಯ ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಅಗತ್ಯ ಬಿದ್ದರೆ ವಿದ್ಯುತ್ ಖರೀದಿ ನಡೆಸಲು ಸರ್ಕಾರ ಬದ್ಧವಾಗಿದೆ ಎಂದರು.

ವಿದ್ಯುತ್ ಉತ್ಪಾದನೆಗೆ ಅನುಮತಿ ಪಡೆದು ಕಾರ್ಯ ಆರಂಭಿಸದ 52 ಕಂಪೆನಿಗಳ ಪರವಾನಿಗಿ ರದ್ದು ಮಾಡಲಾಗಿದೆ ಎಂದು ತಿಳಿಸಿದ ಅವರು, ಬಿಜಾಪುರ ಜಿಲ್ಲೆಯ ಕೂಡಗಿಯಲ್ಲಿ 4 ಸಾವಿರ ಮೆ.ವ್ಯಾ. ಸಾಮರ್ಥ್ಯದ ಶಾಖೋತ್ಪನ್ನ ಘಟಕ ಸ್ಥಾಪನೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನ್ಯಾಯಾಂಗ ನಿಂದನೆ: ಸುಪ್ರೀಂ ತಡೆಯಾಜ್ಞೆ ಮುಂದೂಡಿಕೆ
ತಮಿಳರು ಕರ್ನಾಟಕದ ಪೂರ್ವಿಕರಂತೆ!: ತಮಿಳು ಕಳಗಂ
ಗೋಹತ್ಯೆ ಸಂಪೂರ್ಣ ನಿಷೇಧಕ್ಕೆ ಬದ್ಧ: ಆಚಾರ್ಯ
ಉಪಚುನಾವಣೆ; ಖರ್ಗೆ, ಕೃಷ್ಣಪ್ಪ ಪುತ್ರರಿಗೆ ಟಿಕೆಟ್
2 ವರ್ಷಗಳಲ್ಲಿ 947 ಮರಗಳಿಗೆ ಕೊಡಲಿ: ಯಡಿಯೂರಪ್ಪ
ಭ್ರಷ್ಟರ ವಿರುದ್ಧ ಮುಲಾಜಿಲ್ಲದೆ ಕ್ರಮ: ಯಡಿಯೂರಪ್ಪ