ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಪರಿಸರವಾದಿಗಳ ಹೆಸರಲ್ಲಿ ಯೋಜನೆಗೆ ಅಡ್ಡಿ: ಈಶ್ವರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪರಿಸರವಾದಿಗಳ ಹೆಸರಲ್ಲಿ ಯೋಜನೆಗೆ ಅಡ್ಡಿ: ಈಶ್ವರಪ್ಪ
ರಾಜ್ಯದಲ್ಲಿ ಕೆಲವರು ಪರಿಸರವಾದಿಗಳ ಹೆಸರಿನಲ್ಲಿ ಉದ್ದೇಶಿತ ವಿದ್ಯುತ್ ಉತ್ಪಾದನಾ ಘಟಕಗಳ ಸ್ಥಾಪನೆಗೆ ಅಡ್ಡಿ ಮಾಡುತ್ತಿದ್ದಾರೆ ಎಂದು ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಶುಕ್ರವಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ, ರಾಜ್ಯದ ಬಹುತೇಕ ವಿದ್ಯುತ್ ಬೇಡಿಕೆಯನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಹೈದ್ರಾಬಾದ್-ಕರ್ನಾಟಕ ಭಾಗಕ್ಕೆ ದಿನದ 24ಗಂಟೆಯೂ ವಿದ್ಯುತ್ ಪೂರೈಕೆ ಮಾಡುವ ಚಿಂತನೆ ನಡೆಸಲಾಗಿದೆ ಎಂದೂ ತಿಳಿಸಿದರು.

ಪ್ರಶ್ನೋತ್ತರ ಕಲಾಪದಲ್ಲಿ ಆಡಳಿತಾರೂಢ ಬಿಜೆಪಿ ಸದಸ್ಯ ಮನೋಹರ ಮಸ್ಕಿ ಮತ್ತು ಹೈದರಾಬಾದ್ ಕರ್ನಾಟಕ ಭಾಗದ ಕೆಲವು ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಈಶ್ವರಪ್ಪ, ಜಲ, ಪವನ, ಅನಿಲ ಆಧಾರಿತ ಮೂಲಗಳಿಂದ ವಿದ್ಯುತ್ ತಯಾರಿಕೆಗೆ ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ, ಕೆಲವಡೆ ಪರಿಸರವಾದಿಗಳು ಎಂದು ಹೇಳಿಕೊಂಡು ಕೆಲವರು ಈ ಯೋಜನೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದರು. ಆದರೆ, ಸರ್ಕಾರ ಪರಿಸರ ಮತ್ತು ಅರಣ್ಯಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಂಸದೆ ಜೆ.ಶಾಂತಾಗೆ ಮತ್ತೊಂದು ಸಮನ್ಸ್
ಯಡಿಯೂರಪ್ಪ ಬೆಡ್‌ರೂಂ ಅಲಂಕಾರಕ್ಕೆ 30ಲಕ್ಷ ರೂ.!
ಉಪಚುನಾವಣೆ: ಬಿಜೆಪಿ ನಾಲ್ಕು ಅಭ್ಯರ್ಥಿಗಳ ಘೋಷಣೆ
ವಾಹನಗಳಿಗೆ ಹೈ ಸೆಕ್ಯೂರಿಟಿ ನೋಂದಣಿ ಸಂಖ್ಯೆ
ರೈತರ ಮೇಲಿನ ಮೊಕದ್ದಮೆ ವಾಪಸ್: ಸಿಎಂ
ವಿದ್ಯುತ್ ಕೊರತೆ ಮುಕ್ತ ರಾಜ್ಯಕ್ಕಾಗಿ ಪಣ: ಈಶ್ವರಪ್ಪ