ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯದ ಮುಂದಿನ ಸಿಎಂ ಸಿದ್ದರಾಮಯ್ಯ: ವರ್ತೂರ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯದ ಮುಂದಿನ ಸಿಎಂ ಸಿದ್ದರಾಮಯ್ಯ: ವರ್ತೂರ್
ರಾಜ್ಯದಲ್ಲಿ ಶೀಘ್ರವೇ ಬಿಜೆಪಿ ಸರ್ಕಾರ ಪತನಗೊಳ್ಳಲಿದೆ ಎಂದು ಮತ್ತೊಮ್ಮೆ ಪುನರುಚ್ಚರಿಸಿರುವ ಶಾಸಕ ವರ್ತೂರ್ ಪ್ರಕಾಶ್, ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬೀದರ್ ಜಿಲ್ಲೆಯ ಭಾಲ್ಕಿ ನಗರದ ತಹಸೀಲ್ದಾರ್ ರಂಗನಾಥ್ ಅವರು ಕುರುಬ ಜನಾಂಗಕ್ಕೆ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ಕೊಡಲು ನಿರಾಕರಿಸಿರುವುದನ್ನು ಪ್ರತಿಭಟಿಸಿ ನಡೆಸುತ್ತಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ವರ್ತೂರ್ ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿಗಾದಿಯನ್ನು ಅಲಂಕರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಕಟುವಾಗಿ ಟೀಕಿಸಿದರು.

ದೇವೇಗೌಡರ ಕಾಲದಲ್ಲೂ ಕೂಡ ಕುರುಬ ಜನಾಂಗ ಹಾಗೂ ಕುರುಬ ಮುಖಂಡರಾದ ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡಲಾಗಿತ್ತು. ಈಗ ಕೂಡ ಬಿಜೆಪಿ ಸರ್ಕಾರ ರೈತರನ್ನು ಮತ್ತು ಕುರುಬ ಜನಾಂಗವನ್ನು ವ್ಯವಸ್ಥಿತವಾಗಿ ಮೂಲೆಗುಂಪು ಮಾಡಲು ಹೊರಟಿದೆ ಎಂದರು.

ರೈತ ವಿರೋಧಿಯಾಗಿರುವ ರಾಜ್ಯ ಬಿಜೆಪಿ ಸರ್ಕಾರ ಶೀಘ್ರವೇ ಪತನಗೊಳ್ಳಲಿದ್ದು,ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲಿದ್ದಾರೆ ಎಂದು ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ತಹಸೀಲ್ದಾರ್‌‌ ರಂಗನಾಥ್ ಅವರನ್ನು ಭಾಲ್ಕಿ ತಾಲೂಕಿಗೆ ಸ್ವತಃ ಮುಖ್ಯಮಂತ್ರಿಗಳೇ ನೇಮಕ ಮಾಡಿದ್ದು, ತಾಲೂಕಿನ ಕುರುಬ ಜನಾಂಗದವರಿಗೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ಕೊಡದಂತೆ ನಿರ್ದೇಶನ ನೀಡಿದ್ದಾರೆಂದು ಗಂಭೀರವಾಗಿ ವರ್ತೂರ್ ಆರೋಪಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಜೆಡಿಎಸ್ ಆಳ್ವಿಕೆ ಅಂತ್ಯ; ಕೆಎಂಎಫ್ ಅಧ್ಯಕ್ಷರಾಗಿ ರೆಡ್ಡಿ
ಮೈಸೂರು ಗಲಭೆ; ಮುತಾಲಿಕ್ ಮತ್ತೆ ಬಂಧನ
ಗಣಿಧಣಿಗಳ ಕೇಸ್ ವಾಪಸ್: ಆಚಾರ್ಯ ಸಮರ್ಥನೆ
ಉಪಚುನಾವಣೆಯಲ್ಲಿ ಏಕಾಂಗಿ ಹೋರಾಟ: ಎಚ್‌ಡಿಕೆ
ಪರಿಸರವಾದಿಗಳ ಹೆಸರಲ್ಲಿ ಯೋಜನೆಗೆ ಅಡ್ಡಿ: ಈಶ್ವರಪ್ಪ
ಸಂಸದೆ ಜೆ.ಶಾಂತಾಗೆ ಮತ್ತೊಂದು ಸಮನ್ಸ್