ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ದಸರಾ ಉದ್ಘಾಟನೆಗೆ ರವಿಶಂಕರ್ ಗುರೂಜಿ: ಶೋಭಾ (Dasara | Mysore | BJP | Yeddyurappa | Ravishankar gurujee)
 
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಆರ್ಟ್ ಆಫ್ ಲಿವಿಂಗ್‌‌ನ ಶ್ರೀ ರವಿಶಂಕರ್ ಗುರೂಜಿ ಅವರನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ನಗರದ ಅರಮನೆ ಮಂಡಳಿ ಕಚೇರಿಯಲ್ಲಿ ದಸರಾ ಗೋಲ್ಡ್ ಕಾರ್ಡ್ ಬಿಡುಗಡೆ ಮತ್ತು ದಸರಾ ವೆಬ್‌‌ಸೈಟ್‌ಗೆ ಚಾಲನೆ ನೀಡಿ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಈ ಹಿಂದೆ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರನ್ನು ಆಹ್ವಾನಿಸಲು ಸರ್ಕಾರ ಪ್ರಯತ್ನಿಸಿತ್ತು. ಆದರೆ ಕಲಾಂ ಅವರು ಆ ಸಂದರ್ಭದಲ್ಲಿ ವಿಶ್ವಸಂಸ್ಥೆ ಕಾರ್ಯಕ್ರಮಕ್ಕೆ ತೆರಳಬೇಕಿದೆ. ಹೀಗಾಗಿ ಅವರನ್ನು ಮುಂದಿನ ವರ್ಷ ಆಹ್ವಾನಿಸಲಾಗುವುದು ಎಂದು ಹೇಳಿದರು.

ಹಿಂದಿನ ವರ್ಷಕ್ಕಿಂತ ಈ ಬಾರಿ ದಸರಾ ಮಹೋತ್ಸವವನ್ನು ಇನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲ ಉಪಸಮಿತಿಗಳು ಕಾರ್ಯೊನ್ಮುಖವಾಗಿದೆ. ಎಲ್ಲ ಸಮಿತಿಗಳು ಕಾರ್ಯಕ್ರಮ ವಿವರಗಳನ್ನು ಅಂತಿಮಗೊಳಿಸಿದ್ದು, ಒಂದೆರಡು ದಿನಗಳಲ್ಲಿ ಅದನ್ನು ಪ್ರಕಟ ಮಾಡಲಾಗುವುದು ಎಂದರು.

ಎಚ್1ಎನ್1ಗೆ ಮುಂಜಾಗ್ರತಾ ಕ್ರಮ: ಇದೇ ವೇಳೆ ರಾಜ್ಯದಲ್ಲಿ ಕಾಡುತ್ತಿರುವ ಎಚ್1ಎನ್1 ದಸರಾ ವೇಳೆ ಹರಡದಂತೆ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ಇದರಿಂದ ನಾಗರಿಕರು ಭಯ ಪಡಬೇಕಾದ ಆಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ