ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶಿವಮೊಗ್ಗ; ಗಣೇಶಮೂರ್ತಿ ಮೆರವಣಿಗೆ ಮೇಲೆ ಚಪ್ಪಲಿ ತೂರಾಟ (Shivamogga | Ganesh procession | Communal clashes | Ganesha)
 
ಹಿಂದೂ ಮಹಾಸಭಾ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆ ಸಂದರ್ಭದಲ್ಲಿ ಇಲ್ಲಿನ ಅಮೀರ್ ಅಹಮ್ಮದ್ ವೃತ್ತದಲ್ಲಿ ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲು ಮತ್ತು ಚಪ್ಪಲಿ ತೂರಾಟ ನಡೆಸಿದ್ದಾರೆ. ಕೂಡಲೇ ಪೊಲೀಸರು ಮಧ್ಯಪ್ರವೇಶಿಸಿ ಬಿಗು ವಾತಾವರಣವನ್ನು ತಿಳಿಗೊಳಿಸಿದ ನಂತರ ಮೆರವಣಿಗೆ ಶಾಂತಿಯುತವಾಗಿ ನಡೆಯಿತು.

ಗಣಪತಿ ಮೂರ್ತಿಯನ್ನು ಕೋಟೆ ಭೀಮೇಶ್ವರ ದೇವಾಲಯದ ಸಮೀಪದ ತುಂಗಾ ನದಿಯಲ್ಲಿ ವಿಸರ್ಜಿಸಲಾಯಿತು. ಇಂಧನ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಕುಮಾರಸ್ವಾಮಿ ಭಾಗವಹಿಸಿದ್ದ ಈ ಮೆರವಣಿಗೆ ಸಾಗುತ್ತಿದ್ದ ವೇಳೆ, ಅಮೀರ್ ಅಹಮ್ಮದ್ ಬಳಿ ಬರುತ್ತಿದ್ದಂತೆ ಕಿಡಿಗೇಡಿಗಳು ಕಲ್ಲು, ಚಪ್ಪಲಿ ತೂರಿ ಬಂದಾಗ ಗಾಬರಿಗೊಂಡ ಜನರು ದಿಕ್ಕಾಪಾಲಾಗಿ ಓಡತೊಡಗಿದರು.

ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಕಲ್ಲು ತೂರಿದವರ ಮೇಲೆ ಲಾಠಿ ಪ್ರಹಾರ ನಡೆಸಿದರು. ಅಲ್ಲದೆ ಒಬ್ಬ ಕಿಡಿಗೇಡಿಯನ್ನು ವಶಕ್ಕೆ ತೆಗೆದುಕೊಂಡರು. ನಂತರ ಪರಿಸ್ಥಿತಿ ಹತೋಟಿಗೆ ಬಂದಾಗ ಶಾಂತಿಯುತವಾಗಿ ಮೆರವಣಿಗೆ ನಡೆಯಿತು. ಕಲ್ಲು ತೂರಾಟದಲ್ಲಿ ಪೊಲೀಸ್ ಸೇರಿದಂತೆ ಐವರು ಗಾಯಗೊಂಡಿದ್ದಾರೆ.
• Play Free Online Games Click Here
• Blogs, Videos and More Click Here
• Send Musical and Animated Cards Click Here
• Simple,Fast & Free Email Service Click Here
ಸಂಬಂಧಿತ ಮಾಹಿತಿ ಹುಡುಕಿ