ಕನ್ನಡ ಸಿನಿಮಾ ರಂಗದ ಧ್ರುವತಾರೆ ಡಾ.ರಾಜ್ ಕುಮಾರ್ ಅವರ ಅಂಚೆ ಚೀಟಿ ಹೊರತರುವ ಕುರಿತಾದ ಕರ್ನಾಟಕ ಸರಕಾರದ ಬೇಡಿಕೆಗೆ ಕೇಂದ್ರ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸ್ಪಂದಿಸಿದ್ದು, ನವೆಂಬರ್ 1ರಂದು ಬೆಂಗಳೂರಿನಲ್ಲಿ ಡಾ.ರಾಜ್ ಅಂಚೆಚೀಟಿ ಬಿಡುಗಡೆಯಾಗಲಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಂಪರ್ಕ ಸಚಿವ ಡಿ.ರಾಜಾ ಅವರಿಗೆ ಈ ಕುರಿತು ಪತ್ರ ಬರೆದಿದ್ದರು. ಇದಕ್ಕೆ ಸಚಿವಾಲಯ ಸಮ್ಮತಿ ಸೂಚಿಸಿದೆ.
ರಾಜಾ ಅವರಿಗೆ ಬರೆದಿರುವ ಪತ್ರದಲ್ಲಿ, ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಹ್ವಾನವನ್ನೂ ನೀಡಿದ್ದಾರೆ.