ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮಹಾರಾಷ್ಟ್ರ ಗಡಿಯಲ್ಲಿ ವೈಷಮ್ಯವಿಲ್ಲ: ದೇವೇಗೌಡ (Maharastra | Border issue | Deve Gowda)
Feedback Print Bookmark and Share
 
ವಾಸ್ತವವಾಗಿ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಗಡಿವಿವಾದವೇ ಇಲ್ಲ ಎಂದು ಹೇಳಿರುವ ಮಾಜಿ ಪ್ರಧಾನಿ ದೇವೇಗೌಡ ಅವರು, ಇದೀಗ ಬರಿಯ ರಾಜಕೀಯ ವಿವಾದವಾಗಿ ಮಾತ್ರ ಉಳಿದಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಗಡಿಯಲ್ಲಿನ ಜನತೆಯಲ್ಲಿ ಯಾವುದು ವೈಷಮ್ಯವೂ ಇಲ್ಲ ಎಂದು ಅವರು ಹೇಳಿದ್ದಾರೆ.

ಕರ್ನಾಟಕದಲ್ಲಿರುವ ಮರಾಠಿಗರೂ ಶಾಂತಿಯಿಂದ ನೆಲೆಸಿದ್ದಾರೆ. ಆದರೆ ಕೆಲವರು ರಾಜಕೀಯ ಉದ್ದೇಶಗಳಿಗಾಗಿ ಈ ವಿಚಾರವನ್ನು ಪದೇಪದೇ ಕೆದಕಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಅಷ್ಟೆ ಎಂದು ಅವರು ಹೇಳಿದರು.

ಏತನ್ಮಧ್ಯೆ, ಈ ವಿಚಾರವೀಗ ನ್ಯಾಯಾಲಯದಲ್ಲಿರುವ ಕಾರಣ ಈ ವಿಚಾರದ ಕುರಿತು ತಾನು ಹೆಚ್ಚು ಮಾತಾಡುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.
ಸಂಬಂಧಿತ ಮಾಹಿತಿ ಹುಡುಕಿ