ವಾಸ್ತವವಾಗಿ ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಗಡಿವಿವಾದವೇ ಇಲ್ಲ ಎಂದು ಹೇಳಿರುವ ಮಾಜಿ ಪ್ರಧಾನಿ ದೇವೇಗೌಡ ಅವರು, ಇದೀಗ ಬರಿಯ ರಾಜಕೀಯ ವಿವಾದವಾಗಿ ಮಾತ್ರ ಉಳಿದಿದೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಗಡಿಯಲ್ಲಿನ ಜನತೆಯಲ್ಲಿ ಯಾವುದು ವೈಷಮ್ಯವೂ ಇಲ್ಲ ಎಂದು ಅವರು ಹೇಳಿದ್ದಾರೆ.
ಕರ್ನಾಟಕದಲ್ಲಿರುವ ಮರಾಠಿಗರೂ ಶಾಂತಿಯಿಂದ ನೆಲೆಸಿದ್ದಾರೆ. ಆದರೆ ಕೆಲವರು ರಾಜಕೀಯ ಉದ್ದೇಶಗಳಿಗಾಗಿ ಈ ವಿಚಾರವನ್ನು ಪದೇಪದೇ ಕೆದಕಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಅಷ್ಟೆ ಎಂದು ಅವರು ಹೇಳಿದರು.
ಏತನ್ಮಧ್ಯೆ, ಈ ವಿಚಾರವೀಗ ನ್ಯಾಯಾಲಯದಲ್ಲಿರುವ ಕಾರಣ ಈ ವಿಚಾರದ ಕುರಿತು ತಾನು ಹೆಚ್ಚು ಮಾತಾಡುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.