ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಾವಿರ ಕೋಟಿ ಪರಿಹಾರಕ್ಕೆ ಪಿಎಂಗೆ ಸಿಎಂ ಅಭಿನಂದನೆ (Flood | Relief | Manmohan Singh)
Feedback Print Bookmark and Share
 
ಪ್ರವಾಹ ಸಂತ್ರಸ್ತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದಿಂದ ಪ್ರಧಾನಿ ಮನಮೋಹನ್ ಸಿಂಗ್ ಅವರು ಒಂದು ಸಾವಿರ ಕೋಟಿ ರೂಪಾಯಿ ಪರಿಹಾರ ನೀಡಿರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಪರಿಹಾರ ಘೋಷಣೆಯಲ್ಲಿ ಪ್ರಧಾನಿಯವರು ರಾಜ್ಯಕ್ಕೆ ಅನ್ಯಾಯ ಮಾಡಿಲ್ಲ, ಸಮೀಕ್ಷೆ ನಡೆಸಿದ ತಕ್ಷಣವೇ ಸಾವಿರ ಕೋಟಿ ಘೋಷಿಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಹಾರ ಘೋಷಣೆ ಮಾಡುವ ಭರವಸೆ ತನಗಿದೆ ಎಂದು ಅವರು ಹೇಳಿದ್ದಾರೆ. ಅವರು ಪ್ರಧಾನಿಗಳೊಂದಿಗೆ ವೈಮಾನಿಕ ಸಮೀಕ್ಷೆ ನಡೆಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಸಂತ್ರಸ್ತರ ಪರಿಹಾರದ ಕುರಿತು ಅಕ್ಟೋಬರ್ 12ರಂದು ಉನ್ನತಾಧಿಕಾರಿಗಳ ಸಭೆ ಕರೆಯಲಾಗುವುದು ಎಂಬುದಾಗಿ ಈ ಸಂದರ್ಭದಲ್ಲಿ ತಿಳಿಸಿದ ಅವರು ಅಕ್ಟೋಬರ್ 14ರಂದು ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿನೀಡುವುದಾಗಿ ತಿಳಿಸಿದರು.

ಪ್ರವಾಹ ಉಕ್ಕಿಹರಿದ ಕರ್ನಾಟಕದ 219 ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ಪರಿವರ್ತಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ