ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನವೆಂಬರ್‌ನಲ್ಲಿ ಬಿಜೆಪಿಗೆ ನೂತನ ಅಧ್ಯಕ್ಷರ ಸಾರಥ್ಯ: ಸದಾನಂದ ಗೌಡ (BJP | organisational polls | Karnataka | Sadananda Gowda | elections)
Feedback Print Bookmark and Share
 
NRB
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಅವಧಿಯು ನವೆಂಬರ್ ತಿಂಗಳಿಗೆ ಅಂತ್ಯಗೊಳ್ಳಲಿದ್ದು, ತಿಂಗಳ ಆರಂಭದಿಂದ ಕೊನೆಯವರೆಗೆ ಅಧ್ಯಕ್ಷರ ಚುನಾವಣೆ ಹಾಗೂ ಜಿಲ್ಲಾ-ತಾಲೂಕು ಮಟ್ಟದ ಅಧ್ಯಕ್ಷರ ಚುನಾವಣೆಗಳು ನಡೆಯಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಆಯೋಜಿಸಲಾಗಿದ್ದ ಬಿಜೆಪಿ ಪದಾಧಿಕಾರಿಗಳ ಮಹತ್ವದ ಸಭೆಯ ಸಂದರ್ಭದಲ್ಲಿ ಹಾಜರಿದ್ದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಂಸ್ಥಿಕ ಚುನಾವಣೆಗಳಿಗೆ ಸರ್ಕಾರದ ಮುಖ್ಯ ಸಚೇತಕರಾದ ಶಿವಯೋಗಿ ಸ್ವಾಮಿಯವರನ್ನು ಪಕ್ಷದ ಚುನಾವಣಾಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದರು.

ಪಕ್ಷವು ರಾಜ್ಯಾದ್ಯಂತ ಆಯೋಜಿಸಿದ್ದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಇತಿಹಾಸದಲ್ಲಿಯೇ ಮೊತ್ತಮೊದಲ ಬಾರಿಗೆ 25 ಲಕ್ಷ ಹೊಸ ಸದಸ್ಯರ ನೋಂದಣಿಯಾಗಿದೆ ಎಂದು ಹೇಳಿದರು.

ಉತ್ತರ ಕರ್ನಾಟಕದ ಭಾಗದಲ್ಲಿನ ನೆರೆ ಹಾವಳಿ ಸಂಬಂಧ ಪಕ್ಷದ ಮುಖಡರು ಜನತೆಯೊಂದಿಗೆ ಹೇಗೆ ಸ್ಪಂದಿಸಬೇಕು ಎಂಬ ಬಗ್ಗೆಯೂ ಸಭೆಯಲ್ಲಿ ತಿಳಿಸಿಕೊಡಲಾಯಿತು. ಪ್ರವಾಹದ ಸಂದರ್ಭದಲ್ಲಿ ಮೃತಪಟ್ಟವರಿಗೆ ಈ ಸಭೆಯಲ್ಲಿ ಶ್ರದ್ದಾಂಜಲಿ ಅರ್ಪಿಸಲಾಯಿತು. ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವರಾದ ಶೋಭಾ ಕರಂದ್ಲಾಜೆ, ಆರ್.ಅಶೋಕ್, ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಸಿ.ಟಿ.ರವಿ ಸಭೆಯಲ್ಲಿ ಉಪಸ್ಥಿತರಿದ್ದರು.
ಸಂಬಂಧಿತ ಮಾಹಿತಿ ಹುಡುಕಿ