ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪಕ್ಷದ ಶಿಸ್ತು ಉಲ್ಲಂಘಿಸಿದ್ರೆ ಎಚ್ಚರಿಕೆ: ರೆಡ್ಡಿಗಳಿಗೆ ಡಿ.ವಿ. (BJP | Sadananda gowda | Yeddyurappa | Janaradana Reddy | Congress)
Feedback Print Bookmark and Share
 
NRB
'ಪಕ್ಷದ ಶಿಸ್ತನ್ನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು' ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ಗುಡುಗಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ನಿವಾಸದಲ್ಲಿ ನಡೆಯುತ್ತಿರುವ ಸಭೆಗೂ ಮುನ್ನ ಡಿ.ವಿ.ಖಾಸಗಿ ಟಿವಿ ಚಾನೆಲ್‌ವೊಂದರ ಜೊತೆ ಮಾತನಾಡಿದ ಅವರು, ಪಕ್ಷದಲ್ಲಿನ ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಪಕ್ಷದ ಶಿಸ್ತನ್ನು ಯಾರೇ ಉಲ್ಲಂಘಿಸಲಿ ಅವರ ಬಗ್ಗೆ ಸೂಕ್ತವಾದ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಎಲ್ಲಕ್ಕಿಂತ ಪಕ್ಷ ಮುಖ್ಯ, ನಾವು ತಪ್ಪು ಮಾಡಿದ್ರೆ ಜನ ನಮ್ಮನ್ನು ಕ್ಷಮಿಸುವುದಿಲ್ಲ ಎಂದರು.

ಸೋಮವಾರ ಬಳ್ಳಾರಿ ಗಣಿಧಣಿಗಳು ತಮ್ಮ ಬೆಂಬಲಿಗ ಶಾಸಕ, ಸಚಿವರೊಂದಿಗೆ ಸಭೆ ನಡೆಸಿ, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ. ಅಲ್ಲದೇ ಸಿಎಂ ವಿರುದ್ಧವೇ ಪಕ್ಷದ ಹೈಕಮಾಂಡ್‌ಗೆ ದೂರು ನೀಡುವುದಾಗಿಯೂ ನಿರ್ಧಾರ ಕೈಗೊಂಡಿದ್ದರು.

ರೆಡ್ಡಿ ಸಹೋದರರು ಭಿನ್ನಮತ ಹೊರಹಾಕಿದ್ದನ್ನು ಗಂಭೀರವಾಗಿ ಪರಿಗಣಿಸಿರುವ ಯಡಿಯೂರಪ್ಪ ಕೂಡ ಇಂದು ಬೆಳಿಗ್ಗೆ ಆಪ್ತ ಸಚಿವ,ಶಾಸಕರೊಂದಿಗೆ ಪಕ್ಷದ ಬೆಳವಣಿಗೆ ಕುರಿತು ಸಮಾಲೋಚನೆ ನಡೆಸುತ್ತಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ