ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಇನ್ಮುಂದೆ ಶೋಭಾ ಆಟ ನಡೆಯದು: ರೇಣುಕಾಚಾರ್ಯ (Shobha | Renukacharya | BJP | Yeddyurappa | Sidda ganga)
Feedback Print Bookmark and Share
 
'ರಾಜ್ಯ ಸರ್ಕಾರದೊಳಗೆ ಇನ್ನು ಮುಂದೆ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ವಿ.ಪಿ.ಬಳಿಗಾರ್ ಆಟ ನಡೆಯದು. ಇಬ್ಬರಿಗೂ ಈಗ ಕಾಲ ಕೂಡಿ ಬಂದಿದ್ದು, ತಕ್ಕ ಪಾಠ ಕಲಿಸಲಿದ್ದೇವೆ. ನಾವು ಎಲ್ಲ ಶಾಸಕರು ಒಗ್ಗೂಡಿದ್ದೇವೆ' ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಭಿನ್ನಮತ ಭುಗಿಲೆದ್ದಿರುವಾಗಲೇ ಬುಧವಾರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಯಡಿಯೂರಪ್ಪ ಸರ್ಕಾರಕ್ಕೆ ಯಾವುದೇ ಅಭದ್ರತೆ ಇಲ್ಲ. ಸ್ವಲ್ಪ ಮಟ್ಟಿನ ತೊಂದರೆಯಾಗಿದ್ದರೆ ಅದು ಸಚಿವೆ ಶೋಭಾ ಮತ್ತು ಬಳಿಗಾರ್ ಅವರಂತಹ ಅಧಿಕಾರಿಗಳಿಂದ. ಈ ಇಬ್ಬರು ಮುಖ್ಯಮಂತ್ರಿಗಳಿಗೆ ಕೆಟ್ಟ ಹೆಸರು ತರುತ್ತಿದ್ದಾರೆ. ಶೋಭಾ ಅವರನ್ನು ಸಂಪುಟದಿಂದ ಕೈಬಿಡುವ ಪರಮಾಧಿಕಾರ ಮುಖ್ಯಮಂತ್ರಿಗಳ ಬಳಿಯೇ ಇದೆ ಎಂದು ಪ್ರತಿಕ್ರಿಯಿಸಿದರು.

ಶೋಭಾ ತಮ್ಮ ಸ್ಥಾನಕ್ಕೆ ತಕ್ಕಂತೆ ನಡೆದುಕೊಳ್ಳುತ್ತಿಲ್ಲ. ಸಚಿವರು ಮತ್ತು ಶಾಸಕರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಸರ್ಕಾರದಲ್ಲಿ ಇವರ ಹಸ್ತಕ್ಷೇಪ ಮಿತಿ ಮೀರುತ್ತಿರುವುದು ಇಡೀ ರಾಜ್ಯದ ಜನತೆಗೆ ಕಾಣಿಸುತ್ತಿದೆ. ಬಳಿಗಾರ್ ಕೂಡ ಎಲ್ಲ ಐಎಎಸ್ ಅಧಿಕಾರಿಗಳನ್ನು ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ