ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಚಿವನಾಗಿ ಇದು ನನ್ನ ಅಂತಿಮ ಭಾಷಣ: ಶ್ರೀರಾಮುಲು (Yeddyurappa | Sri Ramulu | BJP | Gadag | Reddy)
Feedback Print Bookmark and Share
 
'ಸಚಿವನಾಗಿ ಇದು ನನ್ನ ಕೊನೆಯ ಭಾಷಣ' ಇದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯವೈಖರಿಯಿಂದ ಮುನಿಸಿಕೊಂಡಿರುವ ಆರೋಗ್ಯ ಸಚಿವ ಬಿ.ಶ್ರೀರಾಮುಲು ಘೋಷಿಸುವ ಮೂಲಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ.

ಗುರುವಾರ ಗದಗದ ಮಾಳವಾಡದಲ್ಲಿ ಪುನರ್ ವಸತಿ ಯೋಜನೆಗೆ ಚಾಲನೆ ನೀಡಿದ ನಂತರ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ತಮ್ಮನ್ನು ತುಳಿಯುವ ಕಾರ್ಯ ನಡೆಸುತ್ತಿರುವುದಾಗಿ ಆರೋಪಿಸಿದರು.

ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂದ ಶ್ರೀರಾಮುಲು, ಕೊನೆಗೆ ಜನ ಸೇವೆ ಮಾತ್ರ ನಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತದೆ. ರಾಜಕೀಯದಲ್ಲಿ ಇರಲಿ ಅಥವಾ ಇಲ್ಲದಿರಲಿ ತಾನು ಯಾವತ್ತಿದ್ದರೂ ನಿಮ್ಮ ಹೃದಯದಲ್ಲಿ ಇರುತ್ತೇನೆ. ಅಲ್ಲದೆ, ಇಲ್ಲಿಯೇ ಇದ್ದು ತಮ್ಮ ಸೇವೆ ಮಾಡುವುದಾಗಿ ಭರವಸೆ ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ