ಪಕ್ಷದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ರಾಜ್ಯದ ಮಠಾಧೀಶರು ತಮಗೆ ಬೆಂಬಲ ನೀಡುವ ನಿಟ್ಟಿನಲ್ಲಿ ಹೇಳಿಕೆ ನೀಡಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸೋಮವಾರ ತಾಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿ ಆಸರೆ ಯೋಜನೆಯ ಭೂಮಿ ಪೂಜೆ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
'ಮುಖ್ಯಮಂತ್ರಿಯಾದ ನಂತರ ನಾಡಿನ ಮಠ-ಮಾನ್ಯಗಳಿಗೆ ಸಾಕಷ್ಟು ಧನಸಹಾಯ ಮಾಡಿದ್ದೇನೆ. ಆದರೆ, ಈಗ ಪಕ್ಷದಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿದೆ ಎಂದುಕೊಂಡು ನನ್ನ ಪರವಾಗಿ ದನಿ ಎತ್ತಬಾರದು. ಅವರು ಮೌನವಾಗಿದ್ದುಕೊಂಡು ಎಲ್ಲವನ್ನು ಗಮನಿಸುತ್ತಿರಬೇಕು' ಎಂದು ಮನವಿ ಮಾಡಿದರು.