ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ತನ್ನ ಸಮಾಧಿ ತಾನೇ ತೋಡಿಕೊಳ್ಳುತ್ತಿದೆ: ಕಾಂಗ್ರೆಸ್ (BJP | Congress | B.R.Patil | Yeddyurappa | Sadananda gowda)
Feedback Print Bookmark and Share
 
ಆಪರೇಶನ್ ಕಮಲವೆಂಬ ಅನಿಷ್ಟ ರಾಜಕೀಯ ತಂತ್ರಗಾರಿಕೆಯಿಂದ ಜನರ ಮೇಲೆ ಸವಾರಿ ಮಾಡಲು ಹೊರಟ ಬಿಜೆಪಿ ಸ್ವತಃ ತನ್ನ ಕಾಲು ತಾನೇ ಮುರಿದುಕೊಂಡು ಬೀಳುವ ಹಂತಕ್ಕೆ ತಲುಪಿದೆ ಎಂದು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಹಾಗೂ ಕಾಂಗ್ರೆಸ್ ನಾಯಕ ಬಿ.ಆರ್.ಪಾಟೀಲ್ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಜಗಳ ಬೀದಿಗೆ ಬಂದಿದೆ. ಗಂಡ-ಹೆಂಡಿರ ಜಗಳದಲ್ಲಿ ಕೂಸು ನುಗ್ಗು ನುಗ್ಗು ಎನ್ನುವಂತೆ ಜನರ ಸ್ಥಿತಿಯಾಗಿದೆ ಎಂದರು.

ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ. ನೆರೆಗೆ ತುತ್ತಾಗಿರುವ ಜನರಿಗೆ ಪರಿಹಾರ ಕೊಡುವಲ್ಲಿ ಅಧಿಕಾರ ಶಾಹಿ ಆಟವಾಡುತ್ತಿದೆ. ಕನ್ನಡ ರಾಜ್ಯೋತ್ಸವದಂದು ನಾಡು-ನುಡಿಗೆ ನಮನ ಸಲ್ಲಿಸುವುದನ್ನು ಬಿಟ್ಟು ಜವಾಬ್ದಾರಿಯಲ್ಲಿರುವ ಮಂತ್ರಿ, ಶಾಸಕರುಗಳು ಬೆಂಗಳೂರು, ಹೈದರಾಬಾದ್ ಮತ್ತು ಗೋವಾಗಳಲ್ಲಿ ಬೀಡುಬಿಟ್ಟು ಮೋಜು ಮಾಡುತ್ತ ನಾಡಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ