ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಿಂದೂ ಯುವತಿ ಇಸ್ಲಾಂಗೆ: ಹೈಕೋರ್ಟ್‌ಗೆ ದೂರು (High court | Shivmoga | Bangalore | Islam)
Bookmark and Share Feedback Print
 
NRB
ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ಶಿವಮೊಗ್ಗದ ಹಿಂದೂ ಯುವತಿಯನ್ನು ಬಲವಂತವಾಗಿ ಕರೆದೊಯ್ದು ಇಸ್ಲಾಂಗೆ ಮತಾಂತರ ಮಾಡಲಾಗಿದ್ದು, ಆಕೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಕೋರಿ ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ದೂರೊಂದು ದಾಖಲಾಗಿದೆ.

ಶಿವಮೊಗ್ಗದ ನಿವಾಸಿಯಾಗಿರುವ ವೈ.ಎಸ್.ಶಿವಾನಂದ ಎಂಬುವರು ಈ ಅರ್ಜಿ ಸಲ್ಲಿಸಿದ್ದು, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ತುಂಗಾನಗರ ಪೊಲೀಸರು ಮತ್ತು ಇರ್ಫಾನ್ ಎಂಬುವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.

ತಮ್ಮ ಮಗಳನ್ನು ಇರ್ಫಾನ್ ಎಂಬಾತ ಬಲವಂತದಿಂದ ಕರೆದೊಯ್ದು ಮತಾಂತರ ಮಾಡಿದ್ದಾನೆ. ಆಕೆ 2005ರಿಂದಲೇ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದಳು. ಆ ನಿಟ್ಟಿನಲ್ಲಿ ಆಕೆಗೆ ಸೂಕ್ತ ಚಿಕಿತ್ಸೆ ನೀಡದಿದ್ದಲ್ಲಿ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ ಆಕೆಯನ್ನು ಪತ್ತೆ ಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ