ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಆಗೋ ಕಾಂಗ್ರೆಸ್ಸಿಗರ ಕನಸು ಈಡೇರದು: ಶೆಟ್ಟರ್ (Siddaramaiah | Jagadish shettar | BJP | Yeddyurappa)
Bookmark and Share Feedback Print
 
'ಮುಖ್ಯಮಂತ್ರಿ ಗದ್ದುಗೆ ಏರಬಹುದು ಎಂಬ ಕನಸು ಕಾಣುತ್ತಿರುವ ಕಾಂಗ್ರೆಸ್ಸಿಗರ ಕನಸು ಈಡೇರದು' ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ್ ಶೆಟ್ಟರ್ ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಲೇವಡಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಸಮರ್ಥಿಕೊಂಡರು. ಬಿಜೆಪಿ ಸರ್ಕಾರ ಪತನಗೊಂಡು,ತಾವು ಸಿಎಂ ಗದ್ದುಗೆ ಅಲಂಕರಿಸಬಹುದು ಎಂದು ಕನಸು ಕಾಣುತ್ತಿರುವ ಕಾಂಗ್ರೆಸ್ಸಿಗರ ಆಸೆ ಈಡೇರದು ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿನ ಆಡಳಿತಾರೂಢ ಭಾರತೀಯ ಜನತಾಪಕ್ಷ ಸಂಪೂರ್ಣ ಐದು ವರ್ಷಗಳ ಕಾಲ ಆಡಳಿತ ನಡೆಸಲಿದೆ. ಸರ್ಕಾರ ಪತನವಾಗುತ್ತೆ, ತಾವು ಅಧಿಕಾರ ಹಿಡಿಯುತ್ತೇವೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದವರು ಕನಸು ಕಾಣುತ್ತಲೇ ಇರಲಿ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಯಾಗಿ, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವುದಾದರೆ ತಮ್ಮ ಅಭ್ಯಂತರ ಇಲ್ಲ ಎಂದು ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ಕುರಿತು ಶೆಟ್ಟರ್ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ ಅವರು ಈ ರೀತಿಯಾಗಿ ಪ್ರತಿಕ್ರಿಯಿಸಿದರು.

ಡಿಸೆಂಬರ್ 18ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಕನಿಷ್ಠ 15ಸ್ಥಾನಗಳಲ್ಲಿ ಗೆಲುವು ಸಾಧಿಸಿ, ಮತ್ತೆ ತಮ್ಮ ಪ್ರಾಬಲ್ಯ ಮೆರೆಯುವುದಾಗಿ ಹೇಳಿದರು. ಆದರೆ ಚುನಾವಣೆ ಹಿನ್ನೆಲೆಯಲ್ಲಿ ರೆಡ್ಡಿ ಸಹೋದರರು ನಡೆಸಿರುವ ಹೈಜಾಕ್ ಪ್ರಕರಣದ ಕುರಿತಂತೆ ತನಗೇನೂ ತಿಳಿದೇ ಇಲ್ಲ ಎಂದು ಹೇಳಿ ನುಣುಚಿಕೊಂಡರು.
ಸಂಬಂಧಿತ ಮಾಹಿತಿ ಹುಡುಕಿ