ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕುರ್ಚಿ ಉಳಿವಿಗೆ ಅನೇಕ ತಪ್ಪು ಮಾಡಿದ್ದೆ: ಯಡಿಯೂರಪ್ಪ (BJP | Yeddyurappa | Karnataka | Bangalore)
Bookmark and Share Feedback Print
 
NRB
'ಅಧಿಕಾರದ ಗದ್ದುಗೆಯನ್ನು ಉಳಿಸಿಕೊಳ್ಳಲಿಕ್ಕಾಗಿ ಅನೇಕ ತಪ್ಪುಗಳನ್ನು ಮಾಡಿದ್ದೇನೆ. ನನಗೆ ನನ್ನ ತಪ್ಪಿನ ಬಗ್ಗೆ ಅರಿವಾಗಿದೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ಬಹಿರಂಗವಾಗಿ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದ ನಿಡುಮಾಮಿಡಿ ಮಠದಲ್ಲಿ ಜಚನಿ ಶತಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಮುಖ್ಯಮಂತ್ರಿಗಳು, ಇನ್ನು ಮುಂದೆ ನನ್ನ ಎಲ್ಲಾ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಈಗಾಗಲೇ ಸಾಕಷ್ಟು ತಪ್ಪು ಮಾಡಿದ್ದೇನೆ. ಆ ಬಗ್ಗೆ ನನ್ನೊಳಗೆ ಪಾಪಪ್ರಜ್ಞೆ ಕಾಡುತ್ತಿದೆ.ಆದರೆ ಮತ್ತೆ ಅಂತಹ ತಪ್ಪು ಮಾಡುವ ಕೆಲಸಕ್ಕೆ ಮುಂದಾಗಲಾರೆ ಎಂದಿರುವ ಅವರು, ವರಿಷ್ಠರ ಮಾರ್ಗದರ್ಶನದಂತೆ ಮುನ್ನಡೆಯುತ್ತೇನೆ ಎಂದರು.

ರಾಜ್ಯದ ಜನರ ಆಶೋತ್ತರ ಈಡೇರಿಕೆ, ಅಭಿವೃದ್ಧಿಯತ್ತ ಹೆಚ್ಚಿನ ಗಮನಹರಿಸಿ ಮುಂದಿನ 3.5ವರ್ಷಗಳ ಅವಧಿಯಲ್ಲಿ ತಪ್ಪಾಗದಂತೆ ನಡೆದುಕೊಳ್ಳುತ್ತೇನೆ ಎಂದು ಅಭಯ ನೀಡಿದರು.

ಯಾವುದೇ ರೀತಿಯಲ್ಲಿ ನಾಡಿನ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಳ್ಳಲಾರೆ. ಒಂದು ವೇಳೆ ಆ ರೀತಿಯಾದರೆ ಅಧಿಕಾರದಲ್ಲಿ ಮುಂದುವರಿಯಲಾರೆ ಎಂದು ಘೋಷಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ