ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಸರ್ಕಾರ ಉರುಳಿಸಲು ಮತ್ತೊಂದು ಷಡ್ಯಂತ್ರ (BJP | Yeddyurappa | Bangalore | Congress | JDS)
Bookmark and Share Feedback Print
 
ಆಡಳಿತಾರೂಢ ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಕಂಟಕ ಎದುರಾಗದೆ. ಪಕ್ಷದೊಳಗಿನ ಕಚ್ಚಾಟ ಶಮನವಾಗಿದೆ ಎಂಬ ಹೇಳಿಕೆಯ ನಡುವೆಯೇ ಭಿನ್ನಮತೀಯ ಶಾಸಕರು ಮತ್ತೊಮ್ಮೆ ಪ್ರತ್ಯೇಕ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ. ರಾಮದಾಸ್ ಕೂಡ ಭಾಗವಹಿಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾಮದಾಸ್ ಖುದ್ದು ಈ ವಿಚಾರವನ್ನು ತಿಳಿಸಿದ್ದಾರೆ. ಮಂಗಳವಾರ ಬೆಂಗಳೂರಿನಲ್ಲಿ ಭಿನ್ನಮತೀಯ ಶಾಸಕರ ಸಭೆ ನಡೆಯುತ್ತಿದ್ದು, ಇದರಲ್ಲಿ ಮುಂದಿನ ಬೆಳವಣಿಗೆ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದ್ದಾರೆ.

ಪಕ್ಷದ ಉಳಿವಿಗಾಗಿ ನಡೆಯುವ ಪ್ರತಿ ಸಭೆಗಳಲ್ಲೂ ತಾನು ಸಕ್ರೀಯವಾಗಿ ಭಾಗಿಯಾಗುತ್ತೇನೆ ಎಂದು ಈ ಸಂದರ್ಭದಲ್ಲಿ ಹೇಳಿದರು. ವಿಧಾನಸಭಾ ಅಧಿವೇಶನ ಕಾರ್ಯಕಲಾಪದಿಂದಲೂ ಸಹ ಭಿನ್ನಮತೀಯ ಶಾಸಕರು ದೂರ ಉಳಿಯುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಒಟ್ಟಾರೆಯಾಗಿ ಒಡೆದ ಮನೆಯಾಗಿರುವ ಬಿಜೆಪಿಯಲ್ಲಿ ಬಣ ರಾಜಕೀಯ ಮತ್ತೆ ಆರಂಭಗೊಂಡಿದೆ.
ಸಂಬಂಧಿತ ಮಾಹಿತಿ ಹುಡುಕಿ