ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿಯಲ್ಲಿ ಭ್ರಷ್ಟರಿಗೆ ಬಡ್ತಿ: ದೇಶಪಾಂಡೆ ಕಿಡಿ (BJP | Yeddyurappa | KPCC | Desh pandy | Congress)
Bookmark and Share Feedback Print
 
NRB
ಮುಖ್ಯಮಂತ್ರಿ ಪಟ್ಟ ಉಳಿಸಿಕೊಳ್ಳಲು ಬಿ.ಎಸ್.ಯಡಿಯೂರಪ್ಪ ಭ್ರಷ್ಟರಿಗೆ ಬಡ್ತಿ ನೀಡಿ ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಲೇವಡಿ ಮಾಡಿದ್ದಾರೆ.

ಬ್ಲ್ಯಾಕ್‌ಮೇಲ್ ತಂತ್ರಗಳಿಗೆ ಮಣಿದು ನಿರ್ಲಜ್ಜರಿಗೆ ಬಡ್ತಿ ನೀಡಿದ ಸಿಎಂ ಅವರ ಕ್ರಮದಿಂದಾಗಿ ಬಿಜೆಪಿಯಲ್ಲಿ ಕಚ್ಚಾಟ ಹೆಚ್ಚಾಗಿದೆ. ಇದರಿಂದ ರಾಜ್ಯದ ಅಭಿವೃದ್ದಿ ಮತ್ತು ಆಡಳಿತದ ಬಗ್ಗೆ ಸರ್ಕಾರ ಸಂಪೂರ್ಣವಾಗಿ ಆಸಕ್ತಿ ಕಳೆದುಕೊಂಡಿದೆ ಎಂದು ಅವರು ದೂರಿದರು.

ಸರ್ಕಾರ ಮಾತ್ರವಲ್ಲ ಆಡಳಿತ ಪಕ್ಷದ ಶಾಸಕರೂ ಸಹ ಸಚಿವ ಪದವಿಯ ಆಸೆಯ ಹಿಂದೆ ಬಿದ್ದು ತಮ್ಮ ಕ್ಷೇತ್ರಗಳ ಅಭಿವೃದ್ಧಿಯನ್ನೇ ಮರೆತಿದ್ದಾರೆ ಎಂದು ದೇಶಪಾಂಡೆ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ