ಫ್ಲೆಕ್ಸ್, ಬ್ಯಾನರ್ ಹಾವಳಿ ತಡೆಗೆ ಕಾರ್ಯಪಡೆ: ಸುರೇಶ್ ಕುಮಾರ್
ಬೆಂಗಳೂರು, ಮಂಗಳವಾರ, 5 ಜನವರಿ 2010( 19:13 IST )
ನಗರದಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್ ಹಾವಳಿಯನ್ನು ನಿಯಂತ್ರಿಸಲು ನಗರ ಪಾಲಿಕೆ ಜಂಟಿ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆಯನ್ನು ರಚಿಸಲು ತೀರ್ಮಾನಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಫ್ಲೆಕ್ಸ್ ಹಾಗೂ ಬ್ಯಾನರ್ ಹಾವಳಿಯನ್ನು ನಿಯಂತ್ರಿಸುವ ಸಂಬಂಧ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ಯಾನರ್ ಹಾವಳಿಗೆ ಕಡಿವಾಣ ಹಾಕಲು ಪಾಲಿಕೆ ಜಂಟಿ ಆಯುಕ್ತರ ಕಾರ್ಯಪಡೆ ರಚಿಸಲು ಇಂದಿನ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದರು.
ಬ್ಯಾನರ್ ಹಾಕಲು ಬಿಬಿಎಂಪಿ ನಿಗದಿದ ಜಾಗಗಳನ್ನು ಗುರುತಿಸಬೇಕು. ಬೇಕಾಬಿಟ್ಟಿ ಜಾಹೀರಾತು ಪ್ರದರ್ಶನ ಇನ್ನು ಮುಂದೆ ಸಾಧ್ಯವಿಲ್ಲ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.