ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕೆಲಸವಿಲ್ಲದ ವಿಪಕ್ಷಗಳಿಂದ ಹೋರಾಟದ ಬೆದರಿಕೆ: ಸಿಎಂ ವ್ಯಂಗ್ಯ (BJP | Yeddyurappa | Congress | JDS | Janardana Reddy | Karnataka)
Bookmark and Share Feedback Print
 
ವಿರೋಧ ಪಕ್ಷಗಳಿಗೆ ಏನೂ ಕೆಲಸವಿಲ್ಲದ ಕಾರಣ ಸಣ್ಣ ಪುಟ್ಟ ವಿವಾದವನ್ನು ಮುಂದಿಟ್ಟುಕೊಂಡು ಹೋರಾಟದ ಬೆದರಿಕೆ ಹಾಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದ್ದಾರೆ.

ಇದಕ್ಕೆ ಸಾಕ್ಷಿಯೆಂಬಂತೆ, ಸಚಿವ ಜನಾರ್ದನ ರೆಡ್ಡಿ ವಿಚಾರದಲ್ಲಿ ಪ್ರತಿಪಕ್ಷಗಳು ವಿವಾದವನ್ನು ಹುಟ್ಟು ಹಾಕುತ್ತಿವೆ. ಪ್ರತಿಪಕ್ಷಗಳು ಏನೇ ಒತ್ತಡ ಹೇರಿದರೂ ಈ ಕುರಿತು ಪ್ರತಿಕ್ರಿಯಿಸಲು ಇಚ್ಛಿಸುವುದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ನೆರೆ ಪರಿಹಾರದಲ್ಲಿ ಹಣ ದುರ್ಬಳಕೆಯಾಗಿದೆ ಎಂಬ ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರತಿಪಕ್ಷದ ನಾಯಕರು ಅಂಕಿ ಅಂಶಗಳನ್ನು ನೀಡಿದರೆ ಜೂನ್ 24ರಿಂದ ಆರಂಭವಾಗುವ ಅಧಿವೇಶನದಲ್ಲಿ ಚರ್ಚಿಸಲಾಗುವುದು. ಈ ಮೂಲಕ ಸತ್ಯ ನಾಡಿನ ಜನರಿಗೆ ಅರಿವಾಗಲಿ ಎಂದು ತಿರುಗೇಟು ನೀಡಿದರು.

ಜೂನ್ ತಿಂಗಳಿಂದ ಪ್ರಾರಂಭವಾಗುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ಪ್ರವಾಸೋದ್ಯಮ ಅಭಿವೃದ್ಧಿ, ವಿದ್ಯುತ್ ಉತ್ಪಾದನೆ ಸೇರಿದಂತೆ ಹಲವು ಒಪ್ಪಂದಗಳಿಗೆ ಸಹಿ ಹಾಕಲಾಗುವುದು ಎಂದರು.
ಸಂಬಂಧಿತ ಮಾಹಿತಿ ಹುಡುಕಿ