ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಪ್ರಾಯಶ್ಚಿತ್ತಕ್ಕಾಗಿ ಶ್ರೀರಾಮುಲು ಕೇಶಮುಂಡನ: ಜಯಚಂದ್ರ (Sri ramulu | Jayachandra | BJP | Yeddyurappa | Janardana Reddy | Congress)
Bookmark and Share Feedback Print
 
ಸಚಿವ ಶ್ರೀರಾಮಲು ತಲೆ ಬೋಳಿಸಿಕೊಂಡು ಬಳ್ಳಾರಿಯಲ್ಲಿ ಪಾದಯಾತ್ರೆ ಮಾಡುತ್ತಿರುವುದು ಸುಗ್ಗಲಮ್ಮನ ದೇವಾಲಯವನ್ನು ಒಡೆದು ಹಾಕಿರುವುದರ ಪ್ರಾಯಶ್ಚಿತ್ತಕ್ಕಾಗಿ ಎಂದು ವಿಧಾನಸಭೆ ಪ್ರತಿಪಕ್ಷದ ಉಪನಾಯಕ ಟಿ.ಬಿ. ಜಯಚಂದ್ರ ತಿರುಗೇಟು ನೀಡಿದ್ದಾರೆ.

ತುಮಕೂರು ಟೌನ್ ಹಾಲ್ ವೃತ್ತದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿ, ಈಗ ತಲೆ ಬೋಳಿಸಿಕೊಂಡು ಓಡಾಡುತ್ತಿರುವ ಇವರು, ಮುಂದೆ ಹುಚ್ಚರಾಗುತ್ತಾರೆ. ಸುಗ್ಗಲಮ್ಮನ ದೇವಾಲಯವನ್ನು ಸ್ಫೋಟಿಸಿ ಗಣಿಗಾರಿಕೆ ಮಾಡಿದ ಪಾಪದ ಫಲ ಉಣ್ಣುತ್ತಾರೆ. 2002ರಲ್ಲಿ ಹವಾಯಿ ಚಪ್ಪಲಿ ಹಾಕಿಕೊಂಡ ಓಡಾಡುತ್ತಿದ್ದ ರೆಡ್ಡಿ ಇಂದು ಹೆಲಿಕ್ಯಾಪ್ಟರ್‌ನಲ್ಲಿ ಓಡಾಡುತ್ತಿದ್ದಾರೆ. ಇವರು ಸಂಪತ್ತು ಲೂಟಿ ಹೊಡೆಯುತ್ತಿರುವುದನ್ನು ನೋಡಿಕೊಂಡು ಕಾಂಗ್ರೆಸ್ ಪಕ್ಷ ಸುಮ್ಮನೆ ಕೂರಬೇಕಾ ಎಂದು ಪ್ರಶ್ನಿಸಿದರು.

ಅಂದು ಬ್ರಿಟಿಷರು ದೇಶದ ಸಂಪತ್ತನ್ನು ಕೊಳ್ಳೆ ಹೊಡೆದಾಗ ಗಾಂಧೀಜಿ, 'ಬ್ರಿಟೀಷರೇ ಭಾರತ ಬಿಟ್ಟು ತೊಲಗಿ' ಎಂದು ಆಗ್ರಹಿಸಿದರು. ಬ್ರಿಟಿಷರು ದೇಶದ ಸಂಪತ್ತನ್ನು ಕೊಳ್ಳೆ ಹೊಡೆದ ಹಾಗೆ ರೆಡ್ಡಿ ಸೋದರರು ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ. ಅವರು ಅಧಿಕಾರದಲ್ಲಿ ಉಳಿಯಬಾರದು ಎಂದು ಗುಡುಗಿದರು.

ಮುಖ್ಯಮಂತ್ರಿ ಯಡಿಯೂರಪ್ಪ ದಯಮಾಡಿ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸಲು ವಿಫಲವಾಗಿರುವ ಯಡಿಯೂರಪ್ಪ ಅವರ ಕುರ್ಚಿಯ ನಟ್ಟು-ಬೋಲ್ಟು ಕಳಚತೊಡಗಿವೆ ಎಂದು ವ್ಯಂಗ್ಯವಾಡಿದರು.
ಸಂಬಂಧಿತ ಮಾಹಿತಿ ಹುಡುಕಿ