ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿ ಶಕ್ತಿ ತೋರಿಸುತ್ತೇವೆ: ಕಾಂಗ್ರೆಸ್‌ಗೆ ಅಶೋಕ್ (BJP | Congress | Ashok | Yeddyurappa | Siddaramaiah)
Bookmark and Share Feedback Print
 
ಕಾಂಗ್ರೆಸ್ ಪಾದಯಾತ್ರೆಗೆ ಹಣ ಕೊಟ್ಟು ಜನರನ್ನು ಕರೆ ತಂದು ಸಮಾವೇಶ ಮಾಡಿರುವುದಾಗಿ ಗಂಭೀರವಾಗಿ ಆರೋಪಿಸಿರುವ ಸಾರಿಗೆ ಸಚಿವ ಆರ್.ಅಶೋಕ್, ಕಾಂಗ್ರೆಸ್ ಮುಖಂಡರಿಗೆ ಆ.20ರಂದು ಬಿಜೆಪಿ ಶಕ್ತಿ ಏನೆಂಬುದನ್ನು ಅದೇ ಬಳ್ಳಾರಿ ಕ್ರೀಡಾಂಗಣದಲ್ಲಿ ತೋರಿಸುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಜಾನಪದಲೋಕದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿಯ ಸುತ್ತ-ಮುತ್ತಲಿನ ಜಿಲ್ಲೆಗಳಿಂದ ಹಣಕೊಟ್ಟು ಜನರನ್ನು ಕರೆತಂದು ತಮ್ಮದು ಐತಿಹಾಸಿಕ ಸಮಾವೇಶ ಎಂದು ತಾವೇ ಬೆನ್ನು ತಟ್ಟಿಕೊಂಡಿದ್ದಾರೆ.

ಆದರೆ ಕಾಂಗ್ರೆಸ್ ಮುಖಂಡರಿಗೆ ಬಳ್ಳಾರಿ ಜಿಲ್ಲೆಯೊಂದರಿಂದಲೇ ಲಕ್ಷಾಂತರ ಜನ ಸಮೂಹ ಸೇರಿಸಿ ಬಿಜೆಪಿಯ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ತಿರುಗೇಟು ನೀಡಿದರು.

ಅಕ್ರಮ ಗಣಿಗಾರಿಕೆಯನ್ನು ಸಿಬಿಐಗೆ ಒಪ್ಪಿಸಬೇಕೆಂದು ಸುಮಾರು 16 ದಿನಗಳ ಕಾಲ ಪಾದಯಾತ್ರೆ ನಡೆಸಿ ಸೋಮವಾರ ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದ ಕುರಿತು ಅಶೋಕ್ ಈ ರೀತಿ ಪ್ರತಿಕ್ರಿಯೆ ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ