ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ತಿಮ್ಮಪ್ಪನಿಗಿಂತ ಶ್ರೀರಾಮುಲು ಪವರ್ ಫುಲ್!: ಸುಬ್ಬಯ್ಯ (Thirupathi | Sri ramulu | Subbayya | Congress | BJP)
Bookmark and Share Feedback Print
 
ತಿರುಪತಿ ತಿಮ್ಮಪ್ಪನಿಗಿಂತ ಸಚಿವ ಶ್ರೀರಾಮುಲು ಅವರು ಇಂದು 'ಪವರ್ ಫುಲ್' ಎಂದು ವಿಧಾನ ಪರಿಷತ್ ಸದಸ್ಯ ಎ.ಕೆ. ಸುಬ್ಬಯ್ಯ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

77ನೇ ಹುಟ್ಟುಹಬ್ಬದ ಅಂಗವಾಗಿ ಎ.ಕೆ. ಸುಬ್ಬಯ್ಯ ಅಭಿನಂದನಾ ಸಮಿತಿ ಆಶ್ರಯದಲ್ಲಿ ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಸಂವಾದದಲ್ಲಿ ಅವರು ಮಾತನಾಡಿದರು.

ತಿರುಪತಿಗೆ ಹೋಗುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಅಲ್ಲಿಗೆ ಹೋದರೆ ತಲೆ ಬೋಳಿಸಿ, ಜೇಬಿನಲ್ಲಿರುವ ಹಣ ಹುಂಡಿಗೆ ಹಾಕಿ ಬರಬೇಕು. ಆದರೆ ಶ್ರೀರಾಮುಲು ತಲೆ ಬೊಳಿಸಿಕೊಳ್ಳುವವರಿಗೆ 10 ಸಾವಿರ ರೂ. ನಗದು ಹಾಗೂ ಚಿನ್ನದ ಉಂಗುರ ನೀಡುತ್ತಿದ್ದಾರೆ. ಇದರಲ್ಲಿ ಸ್ತ್ರೀಯರೂ ಪಾಲ್ಗೊಳ್ಳುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಾದಯಾತ್ರೆ ವಿವಿಧ ವಿನೋದಾವಳಿಯಿಂದ ಕೂಡಿದೆ. ಜನರ ಸಮಸ್ಯೆ ಬಗ್ಗೆ ಪ್ರತಿಪಕ್ಷವಾಗಿ ಕಾಂಗ್ರೆಸ್ ಧ್ವನಿ ಎತ್ತಬೇಕಾಗಿತ್ತು. ಆದರೆ ಈಗ ನಡೆಸಿರುವ ಪಾದಯಾತ್ರೆಯಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ದೂರಿದರು.

ಕಾಂಗ್ರೆಸ್ ಪಕ್ಷ ನಾಯಕತ್ವದ ಬಿಕ್ಕಟ್ಟು ಎದುರಿಸುತ್ತಿದೆ. ಒಬ್ಬರ ಕಾಲನ್ನು ಇನ್ನೊಬ್ಬರು ಎಳೆಯಲು ಪಾದಯಾತ್ರೆಯಲ್ಲಿ ಪೈಪೋಟಿ ನಡೆಸಿದ್ದಾರೆ. ಇದರಿಂದಾಗಿ ಸರಕಾರದ ತಪ್ಪುಗಳನ್ನು ಎತ್ತಿತೋರಿಸಲು ಪಾದಯಾತ್ರೆಯಿಂದ ಸಾಧ್ಯವಾಗಿಲ್ಲ ಎಂದು ಎ.ಕೆ. ಸುಬ್ಬಯ್ಯ ಟೀಕಿಸಿದರು.

ಜಾನುವಾರು ಸಾಕುವವರ ಹಿತಾಸಕ್ತಿಯಿಂದಾಗಿ ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಜಾನುವಾರು ಹತ್ಯೆ ನಿಷೇಧ ಕಾನೂನು ವಿರುದ್ಧದ ಹೋರಾಟದ ನೇತೃತ್ವ ವಹಿಸಿದ್ದೇನೆ. ರೈತರಿಗೆ ಬೇಡವಾದ ಜಾನುವಾರುಗಳನ್ನು ಸರಕಾರಕ್ಕೆ ಹಣಕೊಟ್ಟು ತೆಗೆದುಕೊಳ್ಳು ವುದಾದರೆ ತಾನು ಕಾನೂನು ಜಾರಿಗೆ ಬೆಂಬಲ ನೀಡುವುದಾಗಿ ಘೋಷಿಸಿದರು.
ಸಂಬಂಧಿತ ಮಾಹಿತಿ ಹುಡುಕಿ