ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶೋಭಾ ನೇತೃತ್ವ: ಮಂಗಳಮುಖಿಯರಿಗೆ 400 ರೂ.ಮಾಸಾಶನ (Shobha karandlaje | Mangala mukhi | BJP | Yeddyurappa)
Bookmark and Share Feedback Print
 
ಮಂಗಳಮುಖಿಯರಿಗೆ ಮಾಸಿಕ 400 ರೂಪಾಯಿ ಮಾಸಾಶನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಭರವಸೆ ನೀಡಿದ್ದಾರೆ.

ನಗರದಲ್ಲಿನ ಮಂಗಳಮುಖಿಯರು ಮಾಜಿ ಸಚಿವೆ, ಶಾಸಕಿ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಇಂದು ನಿವಾಸದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಂಗಳಮುಖಿಯರ ಅಹವಾಲನ್ನು ಆಲಿಸಿದ ಅವರು, 40 ವರ್ಷ ಮೇಲ್ಪಟ್ಟ ಮಂಗಳಮುಖಿಯರಿಗೆ ಮಾಸಿಕ 400 ರೂಪಾಯಿ ಮಾಸಾಶನ ನೀಡುವುದಾಗಿ ಭರವಸೆ ನೀಡಿದರು. ಅಲ್ಲದೇ, ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಮಂಗಳಮುಖಿಯರು ಮನವಿ ಸಲ್ಲಿಸಿದರು.

ಸಿಲಿಕಾನ್ ಸಿಟಿಯಲ್ಲಿ ಇನ್ಮುಂದೆ ಮಂಗಳಮುಖಿಯರು ಭಿಕ್ಷಾಟನೆ ವೃತ್ತಿ ಕೈಬಿಟ್ಟು ಜನಸಾಮಾನ್ಯರಂತೆ ಬದುಕಲು ಅವಕಾಶ ಮಾಡಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಹೇಳಿದರು. ಅವರ ಬೇಡಿಕೆಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಸಮಾಜದಲ್ಲಿ ಮಂಗಳಮುಖಿಯರನ್ನು ಕೀಳಾಗಿ ನೋಡುತ್ತಿದ್ದು, ಸರಕಾರದಿಂದಲೂ ಯಾವುದೇ ಸೌಲಭ್ಯ ದೊರೆಯುತ್ತಿಲ್ಲ. ಆ ನಿಟ್ಟಿನಲ್ಲಿ ತಮಗೆ ಸೂಕ್ತ ಸೌಲಭ್ಯ ಒದಗಿಸುವಂತೆ ಶಾಸಕಿ ಶೋಭಾ ಕರಂದ್ಲಾಜೆ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಶೋಭಾ ಅವರು ಖುದ್ದಾಗಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮಂಗಳಮುಖಿಯರ ನೆರವಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.
ಸಂಬಂಧಿತ ಮಾಹಿತಿ ಹುಡುಕಿ