ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಈಶ್ವರಪ್ಪ ತಿರುಗೇಟಿಗೆ ಉಲ್ಟಾ ಹೊಡೆದ ಬೇಳೂರು ಗೋಪಾಲಕೃಷ್ಣ! (Iswarappa | BJP | Beluru gopal krishna | Congress)
Bookmark and Share Feedback Print
 
ಸಚಿವ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ನೀಡಬೇಕು ಇಲ್ಲದಿದ್ದರೆ ನನ್ನ ದಾರಿ ನನಗೆ ಎಂದು ಬೆದರಿಕೆ ಹಾಕಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ ನಿಮ್ಮ ದಾರಿ ನೋಡಿಕೊಳ್ಳಿ ಒಳ್ಳೇದು ಎಂದು ತಿರುಗೇಟು ನೀಡಿದ್ದ ಬೆನ್ನಲ್ಲೇ ಬೇಳೂರು ತೆಪ್ಪಗಾಗಿ ನಾನು ಆ ರೀತಿ ಹೇಳಿಲ್ಲ ನನ್ನ ಹೇಳಿಕೆಯನ್ನು ಮಾಧ್ಯಮಗಳು ತಿರುಚಿ ಬರೆದಿವೆ ಎಂದು ತಿಪ್ಪೆ ಸಾರಿದ್ದಾರೆ!

ನಾನು ಪಕ್ಷದ ಅಧ್ಯಕ್ಷ ಈಶ್ವರಪ್ಪ, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನಿಷ್ಠನಾಗಿದ್ದೇನೆ. ನನ್ನಿಂದ ಯಾವುದೇ ಭಿನ್ನಾಭಿಪ್ರಾಯಕ್ಕೆ ಅವಕಾಶ ನೀಡುವುದಿಲ್ಲ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಸಮಜಾಯಿಷಿ ನೀಡಿದ್ದಾರೆ.

ನನಗೆ ಸಚಿವ ಸ್ಥಾನ ನೀಡುವುದು ಅಥವಾ ಬಿಡುವುದು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ ಎಂದು ತಿಳಿಸಿದ್ದಾರೆ. ಈಶ್ವರಪ್ಪನವರ ತಿರುಗೇಟಿಗೆ ತೆಪ್ಪಗಾದ ಬೇಳೂರು, ಶಿವಮೊಗ್ಗದಲ್ಲಿ ಈಡಿಗ ಸಮುದಾಯ ಬಲವಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತಷ್ಟು ಬೆಳೆಯುವ ನಿಟ್ಟಿನಲ್ಲಿ ಈಡಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡಬೇಕು ಎಂದಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನನಗೆ ಸಚಿವ ಸ್ಥಾನ ಕೊಡಬೇಕು ಇಲ್ಲದಿದ್ದರೆ ನನ್ನ ದಾರಿ ನನಗೆ ಎಂದು ಮಾಧ್ಯಮಗಳು ತಿರುಚಿ ಬರೆದಿರುವುದಾಗಿ ಆರೋಪಿಸಿದ ಅವರು, ನನ್ನಿಂದಾಗಿ ಪಕ್ಷದಲ್ಲಿ ಭಿನ್ನಾಭಿಪ್ರಾಯ ಮೂಡಲು ಅವಕಾಶ ನೀಡುವುದಿಲ್ಲ ಎಂದು ಹೇಳುವ ಮೂಲಕ ಬೇಳೂರು ಈಶ್ವರಪ್ಪ ತಿರುಗೇಟಿಗೆ ತಣ್ಣಗಾದಂತಾಗಿದೆ.

ಮಂತ್ರಿಗಿರಿ ಕೊಡಿ, ಇಲ್ಲಾಂದ್ರೆ ನನ್ನ ದಾರಿ ನನಗೆ-ಬೇಳೂರು
ಸಂಬಂಧಿತ ಮಾಹಿತಿ ಹುಡುಕಿ