ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವರ್ತೂರು ಪ್ರಕಾಶ್‌ಗೆ ಹುಚ್ಚು ಹಿಡಿದಿದೆ: ನಾಗರಾಜ್ (BBMP | Prakash | BJP | Congress | JDS)
Bookmark and Share Feedback Print
 
ಹಿರಿಯ ಮುಖಂಡ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡುತ್ತಿರುವ ಶಾಸಕ ವರ್ತೂರು ಪ್ರಕಾಶ್ ಹುಚ್ಚಾಸ್ಪತ್ರೆಗೆ ದಾಖಲಾಗಲಿ ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಎಂ.ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸಿದ್ದರಾಮಯ್ಯ ಅವರಿಗೆ ಕೋಟಿಗಟ್ಟಲೆ ಹಣ ನೀಡಿರುವುದಾಗಿ ಹೇಳುವ ವರ್ತೂರು ಮತ್ತೊಂದೆಡೆ ಲೋಕಾಯುಕ್ತರ ಬಳಿ ಆಸ್ತಿ ವಿವರ ಸಲ್ಲಿಸುವ ಸಂದರ್ಭದಲ್ಲಿ ತನ್ನ ಬಳಿ ಯಾವುದೇ ಹಣವಿಲ್ಲ ಎಂದು ನೀಡುವ ದ್ವಂದ್ವ ಹೇಳಿಕೆಗಳನ್ನು ಗಮನಿಸಿದ್ದಲ್ಲಿ ವರ್ತೂರ್‌ಗೆ ಹುಚ್ಚು ಹಿಡಿದಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಲೇವಡಿ ಮಾಡಿದರು.

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಬಡಾಯಿಕೊಚ್ಚಿಕೊಳ್ಳುತ್ತಿದ್ದ ವರ್ತೂರು, ಇಂದು ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಈ ಹಿಂದೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಮಾತನಾಡಿ ಈಗ ಅವರ ಬಳಿಯೇ ಸೇರಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರ ವಿರುದ್ಧ ಹೀಗೆ ಅವಹೇಳನಕಾರಿ ಹೇಳಿಕೆಗಳು ಮುಂದವರಿದಲ್ಲಿ ಶಾಸಕ ವರ್ತೂರು ಪ್ರಕಾಶ್ ಮುಂದಿನ ದಿನಗಳಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ