ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಬಿಜೆಪಿಗೆ ಹಣಬಲ, ಜೆಡಿಎಸ್‌ಗೆ ಜನಬಲದ ಜಯ: ಎಚ್‌ಡಿಕೆ (BJP | Kumaraswamy | JDS | Yeddyurappa | By election)
Bookmark and Share Feedback Print
 
ಕಡೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಹಣಬಲದಿಂದ ಗೆಲುವು ಸಾಧಿಸಿದೆ. ಗುಲ್ಬರ್ಗಾ ದಕ್ಷಿಣ ಕ್ಷೇತ್ರದಲ್ಲಿ ಜೆಡಿಎಸ್‌ ಜನಬಲದಿಂದ ಗೆಲುವು ಸಾಧಿಸಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಉಪಚುನಾವಣೆ ಫಲಿತಾಂಶದ ಕುರಿತು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ನಗರದ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ಗುಲ್ಬರ್ಗಾದಲ್ಲಿ ಅನುಕಂಪದಿಂದ ಜೆಡಿಎಸ್ ಗೆದ್ದಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಅವರು, ಜನರ ವಿಶ್ವಾಸದಿಂದ ಪಕ್ಷಕ್ಕೆ ಗೆಲುವಾಗಿದೆ. ಬಿಜೆಪಿ ಅದನ್ನು ಗೌರವಿಸದೆ ಲಘುವಾಗಿ ಮಾತನಾಡುತ್ತಿರುವುದು ಜನತಂತ್ರ ವ್ಯವಸ್ಥೆಗೆ ಮಾಡಿದ ಅಪಮಾನ ಎಂದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಜೆಡಿಎಸ್ ಪಕ್ಷವೇ ಕಾರಣ. ಈಗ ಬಿಜೆಪಿಯನ್ನು ಅಧಿಕಾರದಿಂದ ಕಿತ್ತು ಹಾಕುವುದು ಜೆಡಿಎಸ್ಸೇ ಎಂದು ಭವಿಷ್ಯ ನುಡಿದರು. ಹಣಬಲದಿಂದ ಮೆರೆಯುತ್ತಿರುವ ಬಿಜೆಪಿಗೆ ಮುಂದಿನ ದಿನಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಕಡೂರಿನಲ್ಲಿ ಬಿಜೆಪಿಯದು ನೈತಿಕ ಗೆಲುವಲ್ಲ ಹಣ ಮತ್ತು ಜಾತಿಯಿಂದ ಗೆದ್ದಿದ್ದಾರೆ ಎಂದು ಆರೋಪಿಸಿದರು.
ಸಂಬಂಧಿತ ಮಾಹಿತಿ ಹುಡುಕಿ