ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಂತಕ ಪಡೆ: ದಂಡುಪಾಳ್ಯ ಗ್ಯಾಂಗ್‌ನ 11 ಮಂದಿಗೆ ಗಲ್ಲುಶಿಕ್ಷೆ (Dandupalya | Bangalore | Special court, Murder | capital punishment)
Bookmark and Share Feedback Print
 
ಕೊಲೆ ಸೇರಿದಂತೆ ವಿವಿಧ ಅಪರಾಧಗಳಲ್ಲಿ ಭಾಗಿಯಾಗಿದ್ದ ದಂಡುಪಾಳ್ಯ ಗುಂಪಿನ 11 ಮಂದಿಗೆ ವಿಶೇಷ ನ್ಯಾಯಾಲಯ ಗುರುವಾರ ಮರಣದಂಡನೆ ಶಿಕ್ಷೆ ವಿಧಿಸಿದೆ.

ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ 34ನೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎಚ್.ಆರ್.ಶ್ರೀನಿವಾಸ್ ಈ ತೀರ್ಪು ನೀಡಿದ್ದು, ಎಲ್ಲಾ 11 ಆರೋಪಿಗಳಿಗೂ ಗಲ್ಲುಶಿಕ್ಷೆ ವಿಧಿಸಿದ್ದಾರೆ.

ಕೃಷ್ಣ, ಹನುಮ ಅಲಿಯಾಸ್ ದೊಡ್ಡಹನುಮ, ಮುನಿಕೃಷ್ಣ, ವೆಂಕಟರಮಣ, ತಿಮ್ಮ ಅಲಿಯಾಸ್ ಕೋತಿ ತಿಮ್ಮ, ವೆಂಕಟೇಶ್ ಅಲಿಯಾಸ್ ಚಂದ್ರ, ಮುನಿಕೃಷ್ಣ ಅಲಿಯಾಸ್ ಕೃಷ್ಣ, ನಲ್ಲ ತಿಮ್ಮ ಅಲಿಯಾಸ್ ತಿಮ್ಮ, ಚಿಕ್ಕಮುನಿಯಪ್ಪ ಅಲಿಯಾಸ್ ಮುನಿಯಪ್ಪ, ಕ್ರಿಸಂದು, ಲಕ್ಷ್ಮಿ ಮರಣದಂಡನೆಗೆ ಒಳಗಾಗಿದ್ದಾರೆ.

'ಆರೋಪಿಗಳು ಎಸಗಿರುವ ಕೃತ್ಯ ಅತಿ ಅಮಾನವೀಯವಾದದ್ದು. ಇಂತಹ ಪ್ರಕರಣ ಹಿಂದೆ ನಡೆದಿರಲಿಲ್ಲ. ಈ ಹಿಂದೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್‌ಗಳಲ್ಲಿ ನಡೆದ ಕೆಲವು ಪ್ರಕರಣ ಗಮನಿಸಿದರೆ ಆರೋಪಿಗಳು ಕ್ರೂರವಾದ ರೀತಿಯಲ್ಲಿ ಅಪರಾಧ ಎಸಗಿರುವುದು ಸಾಬೀತಾಗಿದೆ. ಆದ್ದರಿಂದ ಈ ಹಂತಕರಿಗೆ ಮರಣದಂಡನೆಯೇ ಸೂಕ್ತ' ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ತಿಳಿಸಿದ್ದಾರೆ.

ಮರಣದಂಡನೆಗೆ ಗುರಿಯಾಗಿರುವ ಆರೋಪಿಗಳು ದರೋಡೆ, ಅತ್ಯಾಚಾರ, ಕೊಲೆ ಸೇರಿದಂತೆ ವಿವಿಧ ಅಪರಾಧಗಳಲ್ಲಿ ಭಾಗಿಯಾಗಿದ್ದರು. 2000ನೇ ಇಸವಿ ವೇಳೆ ದಂಡುಪಾಳ್ಯ ಗ್ಯಾಂಗ್ ಇಡೀ ಉದ್ಯಾನನಗರಿಯನ್ನೇ ಬೆಚ್ಚಿಬೀಳಿಸಿತ್ತು. ಅಮಾಯಕ ಜನರ ಕುತ್ತಿಗೆ ಸೀಳಿ ಈ ಗ್ಯಾಂಗ್ ಹತ್ಯೆ ನಡೆಸುತ್ತಿತ್ತು.

ಉದ್ಯಾನನಗರಿಯ ಜನರನ್ನು ಭೀತಿಗೆ ದೂಡಿದ್ದ ಕೊಲೆ ಪ್ರಕರಣಗಳನ್ನು ದಾಖಲಿಸಿಕೊಂಡ ಅಂದಿನ ಜಂಟಿ ಪೊಲೀಸ್ ಆಯುಕ್ತ ಸುರೇಶ್ ಬಾಬು ಹಾಗೂ ತನಿಖಾಧಿಕಾರಿ ಛಲಪತಿ 1999-2000ದಲ್ಲಿ ಆರೋಪಿಗಳನ್ನು ಸೆರೆ ಹಿಡಿದು ಜೈಲಿಗೆ ತಳ್ಳಿದ್ದರು.
ಸಂಬಂಧಿತ ಮಾಹಿತಿ ಹುಡುಕಿ