ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ: ಬಾಲಕೃಷ್ಣ (Yeddyurappa | Balakrishna | BJP | JDS | Congress | KIADB)
Bookmark and Share Feedback Print
 
ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಕೆಲವು ಸಚಿವರು ಮತ್ತು ಅವರ ಕುಟುಂಬ ವರ್ಗ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಮತ್ತು ಸಚಿವರು ತಮ್ಮ ಖಜಾನೆ ತುಂಬಿಸಿಕೊಳ್ಳಲು ರಾಜ್ಯದ ಸಂಪತ್ತನ್ನು ಲೂಟಿ ಮಾಡುತ್ತಿದ್ದಾರೆ. ಕಟ್ಟಾಸುಬ್ರಹ್ಮಣ್ಯ ನಾಯ್ಡು ಅಧಿಕಾರಕ್ಕೆ ಬಂದಿರುವುದೇ ಅಕ್ರಮವಾಗಿ. ಇಂಥ ವ್ಯಕ್ತಿ ಅಧಿಕಾರ ಮತ್ತು ಆಡಳಿತ ಯಂತ್ರವನ್ನು ದುರ್ಬಳಕೆ ಮಾಡಿಕೊಂಡು ಕೆಐಎಡಿಬಿಯಲ್ಲಿ ಭೂ ಹಗರಣ ಮಾಡಿದ್ದಾರೆ. ಈ ಹಗರಣದಲ್ಲಿ ಕಟ್ಟಾ ಮತ್ತು ಅವರ ಪುತ್ರರ ಜತೆಗೆ ಇಡೀ ಕುಟುಂಬವೇ ಅಕ್ರಮದಲ್ಲಿ ಪಾಲ್ಗೊಂಡಿರುವುದು ಹಗರಣದ ವ್ಯಾಪಕತೆಯನ್ನು ಬಿಂಬಿಸುತ್ತದೆ ಎಂದು ಲೇವಡಿ ಮಾಡಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರರು ನಕಲಿ ಅಫಿಡವಿಟ್ ಸಲ್ಲಿಸಿ ಅಕ್ರಮವಾಗಿ ಬೆಂಗಳೂರು ಸಮೀಪದಲ್ಲೇ ಕೋಟ್ಯಂತರ ರೂಪಾಯಿ ಬೆಲೆಬಾಳುವ ಭೂಮಿಯನ್ನು ಡಿನೋಟಿಫೈ ಮಾಡಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ರಾಜ್ಯ ಸರಕಾರದಲ್ಲಿ ಈಗ ಬೇಲಿಯೇ ಎದ್ದು ಹೊಲ ಮೇಯುವಂತಾಗಿದೆ. ಅಕ್ರಮಗಳಲ್ಲೇ ಭಾಗಿಯಾಗಿರುವ ಮುಖ್ಯಮಂತ್ರಿ ಅವರು ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.
ಸಂಬಂಧಿತ ಮಾಹಿತಿ ಹುಡುಕಿ