ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿಎಂ ಸ್ಥಾನ ಹೋಗುತ್ತೆ, ನಮಗೆ ಒಳ್ಳೆ ಕಾಲ ಬರುತ್ತೆ: ರೇವಣ್ಣ (Revanna | JDS | BJP | Yeddyurappa | Congress | High court)
Bookmark and Share Feedback Print
 
NRB
ಶಾಸಕರ ಅನರ್ಹತೆ ಪ್ರಕರಣದ ಅಂತಿಮ ತೀರ್ಪಿನ ಬಗ್ಗೆ ತಾಳ್ಮೆಯಿಂದ ಕಾಯಬೇಕು, ಧರ್ಮಕ್ಕೆ ಜಯ ಖಚಿತ ಎಂದಿರುವ ಜೆಡಿಎಲ್‌ಪಿ ನಾಯಕ ಎಚ್.ಡಿ.ರೇವಣ್ಣ, ತೀರ್ಪಿನ ನಂತರ ಬಿ.ಎಸ್.ಯಡಿಯೂರಪ್ಪ ಅಧಿಕಾರದ ಗದ್ದುಗೆಯಿಂದ ಕೆಳಗಿಳಿಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ ನಮ್ಮನ್ನು ಫಾಲೋ ಮಾಡಿ

ಮಂಗಳವಾರ ಗೋಲ್ಡನ್ ಪಾಮ್ ರೆಸಾರ್ಟ್‌ಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರ ಅನರ್ಹತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಬಂದ ನಂತರ ಸಿಎಂ ಸ್ಥಾನ ಹೋಗುವುದು ಖಚಿತ ಎಂದರು.

ಇಷ್ಟು ದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕಾಲವಾಗಿತ್ತು. ಇನ್ನು ಮುಂದೆ ನಮಗೆ ಒಳ್ಳೆಯ ಕಾಲ ಬರುವುದಾಗಿ ಈ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮತ್ತೆ ಆಪರೇಷನ್ ಕಮಲದ ಮೂಲಕ ಜೆಡಿಎಸ್ ಶಾಸಕರನ್ನು ಸೆಳೆಯಲಿದೆ ಎಂಬ ಭಯದಿಂದ 27 ಶಾಸಕರನ್ನು ಗೋಲ್ಡನ್ ಪಾಮ್ ರೆಸಾರ್ಟ್‌ನಲ್ಲಿ ಇರಿಸಿದೆ. ಆ ನಿಟ್ಟಿನಲ್ಲಿ ರೆಸಾರ್ಟ್‌ಗೆ ಭೇಟಿ ನೀಡಿ ರೇವಣ್ಣ ಅವರು ಶಾಸಕರ ಜತೆ ಚರ್ಚೆ ನಡೆಸಿದರು.
ಸಂಬಂಧಿತ ಮಾಹಿತಿ ಹುಡುಕಿ