ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಿದ್ದುಗೆ ಮರ್ಯಾದೆ ಕೊಟ್ಟಿದ್ದೇ ಹೆಚ್ಚಾಯಿತು: ಯಡಿಯೂರಪ್ಪ (Siddaramaiah | Yeddyurappa | BJP | Congress | JDS)
Bookmark and Share Feedback Print
 
ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮೇಲೆ ತೀವ್ರ ವಾಗ್ದಾಳಿ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿದ್ದರಾಮಯ್ಯ ಅವರು ಮಾನಸಿಕ ಅಸ್ವಸ್ಥಕ್ಕೊಳಗಾದವರಂತೆ ಹೇಳಿಕೆ ನೀಡುತ್ತಿದ್ದಾರೆಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲೇ ಸಿದ್ದರಾಮಯ್ಯಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಆ ಪಕ್ಷದಲ್ಲೇ ಅವರನ್ನು ಕೇಳುವವರಿಲ್ಲದಂತಾಗಿದೆ. ಸಿದ್ದರಾಮಯ್ಯನಿಗೆ ಇದುವರೆಗೂ ಕೊಡುತ್ತಿದ್ದ ಮರ್ಯಾದೆ ಹೆಚ್ಚಾಗಿದೆ. ಇದೇ ರೀತಿ ನನ್ನ ವಿರುದ್ಧ ಹೇಳಿಕೆ ನೀಡಿದರೆ ಸೂಕ್ತ ಉತ್ತರ ನೀಡುವುದಾಗಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭೂ ಹಗರಣ ನಡೆಸಿರುವ ಸಂಸದ ರಾಘವೇಂದ್ರ ಆತ್ಮಹತ್ಯೆ ಮಾಡಿಕೊಳ್ಳಬೇಕೆಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜವಾಬ್ದಾರಿಯುತ ನಾಯಕನಾಗಿ ಹೇಗೆ ಮಾತನಾಡಬೇಕೆಂಬ ಸೌಜನ್ಯವೂ ಅವರಿಗಿಲ್ಲ. ಒಬ್ಬ ಹಿರಿಯ ನಾಯಕನೆಂಬ ಕಾರಣಕ್ಕಾಗಿ ಅವರ ಬಗ್ಗೆ ಗೌರವದಿಂದ ಮಾತನಾಡುತ್ತಿದ್ದೆ. ಆದರೆ, ಇತ್ತೀಚೆಗೆ ಅವರು ಬಳಸುತ್ತಿರುವ ಪದಗಳು ಅನುಭವಕ್ಕೆ ತಕ್ಕದಲ್ಲ, ಕಾಮಾಲೆ ಕಣ್ಣಿಗೆ ಹಳದಿ ಎಂಬಂತೆ ವರ್ತಿಸುತ್ತಿದ್ದಾರೆಂದು ಟೀಕಿಸಿದರು.

ಸಿದ್ದರಾಮಯ್ಯ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ. ಕೊಟ್ಟಿರುವ ಗೌರವವನ್ನು ಉಳಿಸಿಕೊಳ್ಳದಿದ್ದರೆ ನಾವು ಕೂಡ ಅದೇ ರೀತಿ ಮಾತನಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ತಮ್ಮ ವಿರುದ್ಧ ಸುತ್ತಿಕೊಂಡಿರುವ ಭೂ ಹಗರಣಗಳ ಕುರಿತು ಪ್ರತಿಕ್ರಿಯಿಸಿದ ಅವರು, ಅಭಿವೃದ್ದಿಯಲ್ಲಿ ರಾಜ್ಯವು 2ನೆ ಸ್ಥಾನದಲ್ಲಿದೆ. ಸರಕಾರದ ಸಾಧನೆಯನ್ನು ಸಹಿಸದೇ ವಿರೋಧ ಪಕ್ಷಗಳು ಇಂತಹ ಆರೋಪ ಮಾಡುತ್ತಿವೆ. ಇದಕ್ಕೆ ಜನರು ಸೊಪ್ಪು ಹಾಕುವುದಿಲ್ಲ ಎಂದು ತಿರುಗೇಟು ನೀಡಿದರು.
ಸಂಬಂಧಿತ ಮಾಹಿತಿ ಹುಡುಕಿ