ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಶೀಘ್ರವೇ ಅನಂತ್, ಶೆಟ್ಟರ್ ಹಗರಣ ಬಯಲು: ರೇವಣ್ಣ ಭವಿಷ್ಯ (Ananth kumar | Jagadish Shettar | Revanna | Yeddyurappa | JDS)
Bookmark and Share Feedback Print
 
ಬಿಜೆಪಿ ನಾಯಕರ ಭೂ ಹಗರಣಗಳು ಒಂದೊಂದಾಗಿಯೇ ಬಯಲಾಗುತ್ತಿದ್ದು, ಮುಖ್ಯಮಂತ್ರಿಗೆ ನೈತಿಕತೆ ಇದ್ದರೆ ಇಂದೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಒತ್ತಾಯಿಸಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯದಲ್ಲೇ ಬಿಜೆಪಿ ರಾಷ್ಟ್ರೀಯ ಮುಖಂಡ, ಸಂಸದ ಅನಂತ್ ಕುಮಾರ್ ಹಾಗೂ ಪ್ರಭಾವಿ ಸಚಿವ ಜಗದೀಶ್ ಶೆಟ್ಟರ್ ಅವರ ಹಗರಣಗಳೂ ಬಯಲಾಗಲಿವೆ ಎಂದು ಭವಿಷ್ಯ ನುಡಿದಿದ್ದಾರೆ.

ರಾಜ್ಯ ಸರಕಾರ ಹಗರಣಗಳ ವಿಷ ವರ್ತುಲಕ್ಕೆ ಸಿಲುಕಿ ಕೋಮಾ ಸ್ಥಿತಿಯಲ್ಲಿದೆ. ಅದು ಹೆಚ್ಚು ಕಾಲ ಉಳಿಯುವುದಿಲ್ಲ. ಎಲ್ಲರ ಬಣ್ಣ ಬಯಲಾಗುವ ಒಳಗೆ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬದ ವಿರುದ್ಧವೇ ಹಗರಣಗಳ ಆರೋಪ ಕೇಳಿಬರುತ್ತಿದೆ. ಸ್ವತಃ ಮುಖ್ಯಮಂತ್ರಿಗಳೇ ಸ್ವಜನ ಪಕ್ಷಪಾತ ಎಸಗಿ ಜನರನ್ನು ವಂಚಿಸಿದ್ದಾರಲ್ಲದೆ ಆತ್ಮವಂಚನೆ ಮಾಡಿಕೊಂಡಿದ್ದಾರೆ. ಅವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕು ಇಲ್ಲ ಎಂದು ಪ್ರತಿಪಾದಿಸಿದರು.
ಸಂಬಂಧಿತ ಮಾಹಿತಿ ಹುಡುಕಿ