ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹತ್ತು ಜನ್ಮ ಎತ್ತಿದ್ರೂ ಏನೂ ಮಾಡಲು ಸಾಧ್ಯವಿಲ್ಲ: ಎಚ್‌ಡಿಕೆ (Kumaraswamy | BJP | Congress | Yeddyurappa | Deve gowda)
Bookmark and Share Feedback Print
 
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹತ್ತು ಜನ್ಮ ಎತ್ತಿ ಬಂದರೂ ದೇವೇಗೌಡರ ಕುಟುಂಬವನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ವಿರುದ್ಧ ಭೂ ಹಗರಣಗಳ ತನಿಖೆಗೆ ಮುಖ್ಯಮಂತ್ರಿಗಳು ಅಧಿಕಾರಿಗಳನ್ನು ಪುಸಲಾಯಿಸಿ ಇಲ್ಲ-ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಅವರು ತಲೆ ಕೆಳಗೆ ಮಾಡಿ ನಿಂತರೂ ನಮ್ಮ ಮೇಲೆ ಯಾವುದೇ ಆರೋಪ ಸಾಬೀತುಪಡಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಯಡಿಯೂರಪ್ಪನವರಿಗೆ ತಾಕತ್ತಿದ್ದರೆ ಬರಲಿ, ತರಳಬಾಳು ಮಠದಲ್ಲಿ ಬಹಿರಂಗ ಚರ್ಚೆ ನಡೆಸೋಣ ಎಂದು ಪಂಥಾಹ್ವಾನ ನೀಡಿದ್ದಾರೆ.

ಯಾರು ಯಾವ ರೀತಿ ಬೆಳೆದು ಬಂದಿದ್ದಾರೆ ಎಂಬ ಬಗ್ಗೆ ರಾಜ್ಯದ ಜನತೆಗೆ ತಿಳಿದಿದೆ. ರಾಜಕಾರಣದಲ್ಲಿ ಕೇವಲ ಮಾತಿನ ಆರೋಪ ಮಾಡುವ ಬದಲು ದಾಖಲೆ ಸಮೇತ ತಪ್ಪುಗಳನ್ನು ಬಹಿರಂಗಪಡಿಸಿ ಎಂದು ಸವಾಲು ಹಾಕಿದರು.

ತಪ್ಪು ಮಾಡಿ ಅದನ್ನು ಮುಚ್ಚಿ ಹಾಕಲು ಇನ್ನೊಬ್ಬರ ಮೇಲೆ ಆರೋಪ ಮಾಡುವುದು ಸರಿಯಲ್ಲ. ನ್ಯಾಯಾಂಗ ತನಿಖೆಗೆ ವಹಿಸುವ ಮೂಲಕ ತನಿಖೆಯಲ್ಲಿ ಹೊರಬರಬಹುದಾದ ಅಂಶಗಳನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ.

ಯಡಿಯೂರಪ್ಪ ಅವರ ವರ್ತನೆಯನ್ನೇ ಅವರ ಪಕ್ಷದ ಶಾಸಕರು ಅನುಸರಿಸುತ್ತಿದ್ದಾರೆ. ಬೆದರಿಕೆಯಂತಹ ತಂತ್ರ ಉಪಯೋಗಿಸಿ ಒಂದು ಸಂಸ್ಥೆಯನ್ನೇ ಬೆದರಿಸುವ ಪ್ರಯತ್ನ ನಡೆಯುತ್ತಿದೆ. ಇದು ಮೌಲ್ಯಯುತ ರಾಜಕೀಯವೇ ಎಂದು ಪ್ರಶ್ನಿಸಿದರು.
ಸಂಬಂಧಿತ ಮಾಹಿತಿ ಹುಡುಕಿ