ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ವಿಪಕ್ಷಗಳ ಮತ್ತಷ್ಟು ಹಗರಣ ಬಯಲಿಗೆ ತರುತ್ತೇನೆ: ಯಡಿಯೂರಪ್ಪ (BJP | Yeddyurapap | Bangalore | Congress | JDS | Election)
Bookmark and Share Feedback Print
 
ಹಿಂದಿನ ಸರಕಾರಗಳು ತಮ್ಮ ಆಡಳಿತಾವಧಿಯಲ್ಲಿ ನಡೆಸಿರುವ ಅವ್ಯವಹಾರ ಮತ್ತು ಹಗರಣಗಳನ್ನು ಜಾಹೀರಾತು ಮೂಲಕ ಬಹಿರಂಗಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.

ಈಗಾಗಲೇ ಹಿಂದಿನ ಸರಕಾರಗಳ ಅವ್ಯವಹಾರಗಳು ಮತ್ತು ಹಗರಣಗಳನ್ನು ಮಾಧ್ಯಮಗಳಲ್ಲಿ ಜಾಹೀರಾತು ನೀಡಿ ರಾಜ್ಯದ ಜನತೆಗೆ ಸತ್ಯಾಂಶ ತಿಳಿಸುವ ಪ್ರಯತ್ನ ಮಾಡುತ್ತಿದ್ದು, ಸಾಧ್ಯವಾದರೆ ಮತ್ತಷ್ಟು ಹಗರಣಗಳನ್ನು ಬಹಿರಂಗಗೊಳಿಸುವುದಾಗಿ ತಿಳಿಸಿದ್ದಾರೆ.ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರಕಾರದ ವಿರುದ್ಧ ಪ್ರತಿಪಕ್ಷಗಳು ಮಾಡುತ್ತಿರುವ ಟೀಕೆಗೆ ರಾಜ್ಯದ ಜನತೆ ಕಿವಿಗೊಡಬಾರದೆಂದು ಮನವಿ ಮಾಡಿದ್ದಾರೆ.

ಕಳೆದ ಎರಡೂವರೆ ವರ್ಷಗಳಿಂದ ಬಿಜೆಪಿ ಸರಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನೇ ಮುಂದಿಟ್ಟುಕೊಂಡು ಜನತೆಯ ಬಳಿ ತೆರಳುತ್ತೇವೆ. ಆದರೆ, ಪ್ರತಿಪಕ್ಷಗಳು ಹಗರಣಗಳನ್ನು ಮುಂದಿಟ್ಟುಕೊಂಡೇ ಜನರ ಬಳಿ ತೆರಳಲಿ. ಆದರೆ, ಜನತೆಯ ತೀರ್ಪು ಯಾರ ಪರ ಬರಲಿದೆ ಎಂಬುದನ್ನು ಕಾದು ನೋಡಿ ಎಂದು ಖಾರವಾಗಿ ತಿರುಗೇಟು ನೀಡಿದರು.

ಈಗಾಗಲೇ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಜನತೆ ಅಭೂತಪೂರ್ವವಾಗಿ ಭಾರತೀಯ ಜನತಾ ಪಕ್ಷದ ಕೈಹಿಡಿಯಲಿದ್ದಾರೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ