ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಕಾಂಗ್ರೆಸ್ ಧೂಳೀಪಟ-ಕೇಂದ್ರದಲ್ಲಿ ಬಿಜೆಪಿಗೆ ಗದ್ದುಗೆ: ರೆಡ್ಡಿ ಭವಿಷ್ಯ (Janardana Reddy | BJP | Deve gowda | Sonia gandhi | Congress)
Bookmark and Share Feedback Print
 
ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರಂಥ ಸಾವಿರ ಮಂದಿ ಜನ್ಮತಾಳಿದರೂ ರೆಡ್ಡಿ ಕುಟುಂಬವನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಕೊಂಡನಾಯಕನಹಳ್ಳಿಯಲ್ಲಿ ಗುರುವಾರ ನಡೆದ ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳನ್ನೊಳಗೊಂಡ ಬಿಜೆಪಿ ವಿಭಾಗೀಯ ಮಟ್ಟದ ಸಭೆ ಉದ್ಘಾಟಿಸಿ ಮಾತನಾಡಿದರು.

ಆಂಧ್ರದಲ್ಲಿ ವೈಎಸ್ಆರ್ ಸಾವನ್ನಪ್ಪಿದ ನಂತರ ನಮಗೆ ಕಾಂಗ್ರೆಸ್ ಪಕ್ಷ ವಿವಿಧ ರೀತಿಯಲ್ಲಿ ಕಿರುಕುಳ ನೀಡಿದೆ ಎಂದು ಆರೋಪಿಸಿರುವ ಅವರು, ಆಂಧ್ರದಲ್ಲಿ ವೈಎಸ್ಆರ್ ಪುತ್ರ ಜಗನ್‌ಮೋಹನ್ ರೆಡ್ಡಿ ಕಾಂಗ್ರೆಸ್ ಅನ್ನು ಧೂಳೀಪಟ ಮಾಡಲಿದ್ದಾರೆ. 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಡ್ರೆಸ್ ಇಲ್ಲದಂತಾಗುತ್ತದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೇರಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿ ಪ್ರತಿಪಕ್ಷಗಳು ಸತ್ತಿದ್ದು, ಮರುಜೀವ ಕೊಡಲು ಆ ಪಕ್ಷಗಳ ನಾಯಕರು ಹರಸಾಹಸ ಪಡುತ್ತಿದ್ದಾರೆ. ಬಳ್ಳಾರಿ ರೆಡ್ಡಿ ಸಹೋದರರು ಗಣಿ ಲೂಟಿ ಮಾಡಿದ್ದಾರೆ ಎಂದು ಪ್ರತಿಪಕ್ಷದವರು ಬೊಬ್ಬೆ ಹಾಕಿದರು. ಆದರೆ ಕಾಂಗ್ರೆಸ್ ಮುಖಂಡರಿಗೆ ಒಂದೇ ಒಂದು ದಾಖಲೆ ತೋರಿಸಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಅಲ್ಲದೇ ಜಿಲ್ಲೆಯಲ್ಲಿ 2 ಲಕ್ಷ ಕೋಟಿ ರೂ.ವೆಚ್ಚದಲ್ಲಿ ಕಬ್ಬಿಣ ಕಾರ್ಖಾನೆ ಸ್ಥಾಪಿಸಲು ನಾನಾ ಉದ್ಯಮಿಗಳು ಮುಂದೆ ಬಂದಿದ್ದಾರೆ. ಲಕ್ಷಾಂತರ ಜನರಿಗೆ ಉದ್ಯೋಗ ದೊರೆಯಲಿದೆ. 140 ಕೋಟಿ ರೂ.ವೆಚ್ಚದಲ್ಲಿ ಬಳ್ಳಾರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲಾಗುತ್ತದೆ ಎಂದು ಈ ಸಂದರ್ಭದಲ್ಲಿ ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ