ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹೆಗ್ಡೆ, ರಾಜ್ಯ ರಾಜಕಾರಣದ ಬಗ್ಗೆ 'ನೋ ಕಾಮೆಂಟ್': ಅಡ್ವಾಣಿ (Advani | BJP | Udupi | Pejavara shree | Congress | Santhosh hegde)
Bookmark and Share Feedback Print
 
PTI
'ಕರ್ನಾಟಕ ರಾಜ್ಯ ರಾಜಕಾರಣ ಬಗ್ಗೆ ಏನೂ ಮಾತನಾಡಲ್ಲ. ಅದೇ ರೀತಿ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ ಕುರಿತೂ ಪ್ರತಿಕ್ರಿಯೆ ನೀಡಲಾರೆ' ಎಂದು ಬಿಜೆಪಿ ರಾಷ್ಟ್ರೀಯ ಮುಖಂಡ ಎಲ್.ಕೆ.ಅಡ್ವಾಣಿ ತಿಳಿಸಿದ್ದಾರೆ.

ಶನಿವಾರ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯ ರಾಜಕೀಯದ ಕುರಿತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಪರಾಮರ್ಶಿಸಿದ್ದಾರೆ. ಹಾಗಾಗಿ ನಾನು ಆ ಬಗ್ಗೆ ಏನೂ ಪ್ರತಿಕ್ರಿಯೆ ನೀಡಲ್ಲ ಎಂದು ನುಣುಚಿಕೊಂಡರು.

ಬಳಿಕ ಅವರು ವಿಮಾನ ನಿಲ್ದಾಣದಿಂದ ಕಾರಿನಲ್ಲಿ ಉಡುಪಿಯ ಪಾಜಕ ಕ್ಷೇತ್ರಕ್ಕೆ ಭೇಟಿ ನೀಡಿದರು. ಮಧ್ವಾಚಾರ್ಯರ ಹುಟ್ಟೂರು ಪಾಜಕಕ್ಕೆ ಭೇಟಿ ನೀಡಿರುವುದರಿಂದ ಮನಸ್ಸಿಗೆ ತುಂಬಾ ಖುಷಿಯಾಗಿದೆ ಎಂದು ಅಭಿಪ್ರಾಯವ್ಯಕ್ತಪಡಿಸಿದರು.

ಸಂಜೆ ಉಡುಪಿಯಲ್ಲಿ ಪೇಜಾವರಶ್ರೀ ವಿಶ್ವೇಶ ತೀರ್ಥರ ವಿರಾಟ್ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ ಅವರು, ಭಾನುವಾರ ಬೆಳಿಗ್ಗೆ ವಾಪಸ್ಸಾಗುವುದಾಗಿ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ