ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಸಾವಿರ ರಾಜ್ಯಪಾಲರು ಬಂದ್ರೂ ಏನೂ ಮಾಡಲು ಆಗಲ್ಲ: ಈಶ್ವರಪ್ಪ (Ishwarappa | Bharadwj | Hassan | Congress | BJP)
Bookmark and Share Feedback Print
 
ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಸಾವಿರ ರಾಜ್ಯಪಾಲರು ಬಂದರೂ ಬಿಜೆಪಿಯನ್ನು ಏನು ಮಾಡಲಾಗದು ಎಂದು ಸವಾಲು ಹಾಕಿದ್ದಾರೆ.

ರಾಜ್ಯಪಾಲರು ವಿಪಕ್ಷ ನಾಯಕನಂತೆ ವರ್ತಿಸುತ್ತಿದ್ದಾರೆ ಎಂದು ಹರಿಹಾಯ್ದಿರುವ ಅವರು ಎಷ್ಟೇ ತಂತ್ರ ಮಾಡಿದರೂ ಬಿಜೆಪಿ ಸರಕಾರವನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಹಾಸನ ಜಿಲ್ಲೆಯಲ್ಲಿ ಪಂಚಾಯ್ತಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ರಾಜ್ಯಪಾಲರ ವಿರುದ್ಧ ಸುದ್ದಿಗಾರರ ಜತೆ ಮಾತನಾಡುತ್ತ ಈ ರೀತಿ ಪ್ರತಿಕ್ರಿಯಿಸಿದ್ದಾರೆ. ನೀರಾ ರಾಡಿಯಾ ಜತೆ ಸಂಸದ ಅನಂತ್ ಕುಮಾರ್ ಅವರ ಹೆಸರನ್ನು ತಳಕು ಹಾಕಿರುವುದರಲ್ಲಿ ಕಾಂಗ್ರೆಸ್‌ನ ಕುತಂತ್ರ ಅಡಗಿದೆ ಎಂದು ಅವರು ಆರೋಪಿಸಿದರು.
ಸಂಬಂಧಿತ ಮಾಹಿತಿ ಹುಡುಕಿ