ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಮುಖ್ಯಮಂತ್ರಿ ಭ್ರಷ್ಟಾಚಾರಿ ನಂಬರ್ ಒನ್: ದೇವೇಗೌಡ (Devegowda | Yediyurappa | Corruption)
Bookmark and Share Feedback Print
 
PTI
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೇಶದಲ್ಲಿಯೇ ನಂಬರ್ ಒನ್ ಭ್ರಷ್ಟಾಚಾರಿ.ಇವರ ಅವಧಿಯಲ್ಲಿ ನಡೆದಿರುವ ಹಗರಣಗಳು 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಮವಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಕಿಡಿಕಾರಿದ್ದಾರೆ.

ರಾಜ್ಯದ ಬಿಜೆಪಿ ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಬಿಜೆಪಿ ಹೈಕಮಾಂಡ್ ಮೂಕಪ್ರೇಕ್ಷಕವಾಗಿರುವುದನ್ನು ಗಮನಿಸಿದಲ್ಲಿ ಹೈಕಮಾಂಡ್ ಕೂಡಾ ಮುಖ್ಯಮಂತ್ರಿಗಳ ಭ್ರಷ್ಟಾಚಾರದಲ್ಲಿ ಶಾಮೀಲಾಗಿದೆ ಎನ್ನುವುದು ಬಹಿರಂಗವಾದಂತಾಗಿದೆ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪ ಅವರ ಭ್ರಷ್ಟಾಚಾರದ ಬಗ್ಗೆ ಸಂಸತ್ತಿನಲ್ಲಿ ದಾಖಲೆ ಸಹಿತ ಮಂಡಿಸಿ ಕೇಂದ್ರ ಸರಕಾರವನ್ನು ಎಚ್ಚರಿಸುತ್ತೇನೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿ ಹೈಕಮಾಂಡ್, ಭ್ರಷ್ಟಾಚಾರದಲ್ಲಿಯೇ ಮುಳುಗಿರುವುದು ವಿಪರ್ಯಾಸವಾಗಿದೆ ಎಂದು ಗುಡುಗಿದ್ದಾರೆ.

ಬಂಗಾರಪ್ಪ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದರಿಂದ ಪಕ್ಷಕ್ಕೆ ಬಲ ಬಂದಿದೆ ಎನ್ನುವ ವಾದವನ್ನು ತಳ್ಳಿಹಾಕಿದ ಅವರು, ಅವರಂತಹ ಮತ್ತಷ್ಟು ನಾಯಕರು ಜೆಡಿಎಸ್‌ಗೆ ಸೇರ್ಪಡೆಯಾಗಬೇಕು. ಬಿಜೆಪಿ ವಿರುದ್ಧ ಹೋರಾಟ ಮಾಡುವ ಸಂಕಲ್ಪ ಹೊಂದಿರುವ ನಾಯಕರಿಗೆ ಪಕ್ಷ ಸ್ವಾಗತಿಸುತ್ತದೆ ಎಂದು ಮಾಜಿ ಪ್ರದಾನಿ ದೇವೇಗೌಡ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ