ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭಾರದ್ವಾಜ್ ಪಾಕಿಸ್ತಾನದ ರಾಜ್ಯಪಾಲರೇ?: ತೊಗಾಡಿಯಾ (Praveen Thogadiya | Pakistan | Karnataka | Bharadwj | BJP)
Bookmark and Share Feedback Print
 
ಗೋ ಹತ್ಯೆ ತಡೆ ಮಸೂದೆಗೆ ಅಂಕಿತ ಹಾಕಲು ಹಿಂದೇಟು ಹಾಕುತ್ತಿರುವ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಕರ್ನಾಟಕದ ರಾಜ್ಯಪಾಲರೋ ಅಥವಾ ಪಾಕಿಸ್ತಾನದ ರಾಜ್ಯಪಾಲರೋ ಎಂದು ಪ್ರಶ್ನಿಸಿರುವ ವಿಶ್ವಹಿಂದೂ ಪರಿಷತ್ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ತೊಗಾಡಿಯಾ, ಮುಸಲ್ಮಾನರನ್ನು ಸಂತುಷ್ಟಗೊಳಿಸಲು ಅವರು ಹೀಗೆ ಮಾಡುತ್ತಿದ್ದಾರೆ ಎಂಬುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ನೆಹರೂ ಮೈದಾನದಲ್ಲಿ ಭಾನುವಾರ ನಡೆದ ಬೃಹತ್ ಹಿಂದೂ ಸಮಾಜೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಗೋವಿನ ಹಾಲು ಮತ್ತು ಗೋ ಮೂತ್ರದಿಂದ ಏನೆಲ್ಲ ಪ್ರಯೋಜನವಿದೆ ಎಂದು ಈಗಾಗಲೇ ವೈಜ್ಞಾನಿಕವಾಗಿ ಸಾಬೀತಾಗಿದೆ. ಗೋಸಂಪತ್ತು ರಕ್ಷಿಸಲು ಪ್ರತಿಯೊಬ್ಬ ಹಿಂದೂ ಸಂಕಲ್ಪ ತೊಡಬೇಕು ಎಂದು ಕರೆ ನೀಡಿದರು.

ಅಯೋಧ್ಯೆಯಲ್ಲಿ ರಾಮನ ಜನ್ಮಸ್ಥಾನದಲ್ಲೆ ಭವ್ಯ ಮಂದಿರ ನಿರ್ಮಾಣ ಮಾಡಲಾಗುವುದು. ಈ ಸಂಬಂಧ ಸೂಕ್ತ ಕಾನೂನು ರಚಿಸಿ ಪೂರ್ಣ ಸ್ಥಳವನ್ನು ಹಿಂದೂಗಳಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು. ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರನ್ನು ಮತಾಂತರಗೊಳಿಸುವ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ ಅವರು, ಪ್ರಮುಖ ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಮೂಲಕ ನಮ್ಮ ಆರ್ಥಿಕತೆಯನ್ನು ಹಾಳು ಮಾಡುವ ಸಂಚು ನಡೆದಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ