ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಜೆಡಿಎಸ್ ಕೋಟೆಗೆ ಲಗ್ಗೆ ಹಾಕಲು ಸಾಧ್ಯವಿಲ್ಲ: ಬಾಲಕೃಷ್ಣ (JDS | Magadi | Balakrishna | Congress | BJP | Yeddyurappa)
Bookmark and Share Feedback Print
 
ನಿಷ್ಠಾವಂತ ಕಾರ್ಯಕರ್ತರು ಇರುವವರೆಗೂ ಮಾಗಡಿ ಜೆಡಿಎಸ್‌ನ ಭದ್ರಕೋಟೆಯಾಗೇ ಉಳಿಯಲಿದೆ ಎಂದು ಶಾಸಕ ಬಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸ್ವಗೃಹದಲ್ಲಿ ಜೆಡಿಎಸ್ ಸದಸ್ಯರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ನಮ್ಮ ವಿರುದ್ಧ ಕೆಲಸ ಮಾಡಿದವರಿಗೆ ಜೆಡಿಎಸ್ ಸಾಮರ್ಥ್ಯ ಏನೆಂಬುದು ಮತ್ತೊಮ್ಮೆ ಅರಿವಾಗಿದೆ ಎಂದು ತಿರುಗೇಟು ನೀಡಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಡಳಿತಾವಧಿಯಲ್ಲಿ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಿದೆ. ಮಾಗಡಿಯ ಜನತೆ ನಮ್ಮನ್ನು ಎಂದಿಗೂ ಕೈ ಬಿಡುವುದಿಲ್ಲ. ನಮ್ಮಲ್ಲಿರುವ ಪ್ರಾಮಾಣಿಕ ಕಾರ್ಯಕರ್ತರ ಶ್ರಮದಿಂದ ಸದಾ ನಾವು ಗೆಲುವಿನ ರೂವಾರಿಗಳಾಗಿರತ್ತೇವೆ ಎಂದರು.

ತಾಲೂಕಿನ ನಾಲ್ಕು ಜಿ.ಪಂ, 14 ತಾ.ಪಂ. ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರು ಹಾಗೂ ಕ್ಷೇತ್ರದ ಮತದಾರರಿಗೆ ಶಾಸಕರು ಇದೇ ವೇಳೆ ಅಭಿನಂದನೆ ಸಲ್ಲಿಸಿದರು.

ತಾಲೂಕಿನ ಹಲವೆಡೆಯಿಂದ ಕಾರ್ಯಕರ್ತರು ಬಂದಿದ್ದರಿಂದ ಶಾಸಕರ ಮೊಗದಲ್ಲಿ ಸಂಭ್ರಮ ಮನೆ ಮಾಡಿತ್ತು. ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳೊಂದಿಗೆ ಆಗಮಿಸಿದ್ದ ನೂರಾರು ಅಭಿಮಾನಿಗಳಿಗೆ ಸಿಹಿ ವಿತರಿಸುವ ಮೂಲಕ ಶಾಸಕರು ಎಲ್ಲರನ್ನೂ ಅಭಿನಂದಿಸಿದರು.
ಸಂಬಂಧಿತ ಮಾಹಿತಿ ಹುಡುಕಿ