ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ಬಕಾಸುರ;ನಮ್ಮ ಶಾಪ ತಟ್ಟುತ್ತೆ: ವೆಂಕಟರಮಣಪ್ಪ (BJP | Yeddyurappa | Venkataramanappa | Congress | Siddaramaiah)
Bookmark and Share Feedback Print
 
ಪಕ್ಷೇತರ ಶಾಸಕರನ್ನು ಕೈಬಿಡುವುದಿಲ್ಲ ಎಂದು ಭರವಸೆ ನೀಡುತ್ತಲೇ ಮೋಸ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಕಾಸುರ ಇದ್ದಂತೆ. ಅವರಿಗೆ ನಮ್ಮ ಶಾಪ ತಟ್ಟಲಿದೆ ಎಂದು ಅನರ್ಹಗೊಂಡ ಪಕ್ಷೇತರ ಶಾಸಕ ವೆಂಕಟರಮಣಪ್ಪ ವಾಗ್ದಾಳಿ ನಡೆಸಿರುವ ಪರಿ ಇದಾಗಿದೆ.

ನಮ್ಮಿಂದಲೇ ಬಿಜೆಪಿ ಸರಕಾರ ರಚನೆಯಾಗಿದೆ. ನಮ್ಮಿಂದ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದು, ಆದರೆ ಕೊನೆಗೂ ನಮಗೆ ಮೋಸ ಮಾಡಿದ್ದಾರೆ. ಹಾಗಾಗಿ ಅವರು ಈ ಪಾಪದ ಫಲ ಅನುಭವಿಸಲೇಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳು ಮಾಡಿರುವ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಜೈಲು ಸೇರಲಿದ್ದಾರೆ ಎಂದರು.

ಅವರು ಶನಿವಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ನಂತರ ಸುದ್ದಿಗಾರರ ಜತೆ ಮಾತನಾಡುತ್ತ, ಬಿಜೆಪಿ ಸರಕಾರಕ್ಕೆ ಉಳಿಗಾಲವಿಲ್ಲ. ನ್ಯಾಯಾಲಯದಲ್ಲಿ ಅನರ್ಹ ಶಾಸಕರಿಗೆ ಜಯ ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಸೌಜನ್ಯಕ್ಕಾಗಿ ಭೇಟಿ ಮಾಡಿದ್ದೇನೆ. ನಾನು ಬೇರೆ ಯಾವುದೇ ಪಕ್ಷವನ್ನು ಸೇರುವ ಪ್ರಶ್ನೆಯೇ ಇಲ್ಲ ಎಂದು ಈ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ