ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಹಾವೇರಿನಲ್ಲಿ ಮತಾಂತರಕ್ಕೆ ಯತ್ನ; ಹಿಂದೂ ಸಂಘಟನೆ ದಾಳಿ (Karnataka | Haveri | Hindu | Bangalore)
Bookmark and Share Feedback Print
 
ಮತಾಂತರಕ್ಕೆ ಯತ್ನಿಸುತ್ತಿದ್ದ ಕ್ರೈಸ್ತ ಧರ್ಮ ಪ್ರಚಾರಕರನ್ನು ಹಿಂದೂ ಸಂಘಟನೆಗಳು ಮನೆಯಲ್ಲಿ ಕೂಡಿ ಹಾಕಿದ ಘಟನೆ ಹಾವೇರಿ ಜಿಲ್ಲೆನಲ್ಲಿ ನಡೆದಿದೆ.

ಹಿರೇಕೆಕೂರಿನ ನವನಗರದಲ್ಲಿ ಮತ ಪ್ರಚಾರಕ್ಕೆ ಯತ್ನಿಸುತ್ತಿದ್ದರೆಂದು ಆರೋಪಿಸಲಾಗಿದೆ. ಇದರಿಂದಾಗಿ ಪ್ರದೇಶದಲ್ಲಿ ಬಿಗುವಿನ ವಾತಾವರಣ ನೀರ್ಮಾಣವಾಗಿತ್ತು. ಆದರೆ ಸ್ಥಳಕ್ಕಾಗಮಿಸಿದ ಪೊಲೀಸರು ಏಳು ಮಂದಿ ಕೈಸ್ತ ಧರ್ಮ ಪ್ರಚಾರಕರನ್ನು ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಮನೆ ಮನೆ ತೆರಳಿ ಪ್ರಚಾರ ಮಾಡುತ್ತಿದ್ದರೆಂಬ ಆರೋಪ ಕೇಳಿಬಂದಿವೆ. ಇದರ ವಿರುದ್ಧ ಕೆರಳಿದ ಹಿಂದೂ ಸಂಘಟನೆಗಳು ಧರ್ಮ ಪ್ರಚಾರಕರನ್ನು ಮನೆಯಲ್ಲಿ ಕೂಡು ಹಾಕಿದ್ದರು ಎಂದು ಹೇಳಲಾಗಿದೆ.

ಇದೀಗ ವಿಚಾರಣೆ ನಡೆಸುತ್ತಿರುವ ಪೊಲೀಸರು ಮತ ಪ್ರಚಾರಕ್ಕೆ ಆಗಮಿಸಿದರ ಉದ್ದೇಶ ಏನಾಗಿತ್ತು, ಅವರು ಸ್ಥಳೀಯರೇ ಅಥವಾ ಹೊರಗಿನವರೇ ಎಂಬುದರ ಬಗ್ಗೆಯೂ ತನಿಖೆ ನಡೆಸುತ್ತಿದೆ.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ
ಸಂಬಂಧಿತ ಮಾಹಿತಿ ಹುಡುಕಿ