ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಯಡಿಯೂರಪ್ಪ ತಾವೇ ಕೈ ಕತ್ತರಿಸಿಕೊಳ್ಳಲಿ: ದೇವೇಗೌಡ (Yaddyurappa | Devegowda | Karnataka Politics | Land Scam)
Bookmark and Share Feedback Print
 
ಭ್ರಷ್ಟಾಚಾರ ಹಗರಣಗಳ ಆರೋಪ ಹೊತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇದೀಗ ತಮ್ಮ ಕೈ ತಾವೇ ಕತ್ತರಿಸಿಕೊಳ್ಳಬೇಕು ಎಂದಿದ್ದಾರೆ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ ಹರದನಹಳ್ಳಿ ದೊಡ್ಡೇಗೌಡ ದೇವೇಗೌಡರು.

ತುರುವೇಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು, ಭ್ರಷ್ಟಾಚಾರದಲ್ಲಿ ತೊಡಗಿದವರ ಕೈ ಕತ್ತರಿಸಬೇಕು ಎಂದು ಈ ಹಿಂದೆ ಯಡಿಯೂರಪ್ಪ ಅವರೇ ಹೇಳಿದ್ದರು. ಇದೀಗ ಅವರ ಹೇಳಿಕೆ ಅವರಿಗೇ ಅನ್ವಯವಾಗುತ್ತದೆ ಎಂದು ಹೇಳಿದರು.

ಬಿಜೆಪಿಯ ಗರ್ವ ಭಂಗ ಮಾಡಬೇಕಿದ್ದರೆ, ಜಾತ್ಯತೀತ ಜನತಾ ದಳವು ವಜ್ರಾಯುಧವಾಗಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ದೇವೇಗೌಡ ಅಭಿಪ್ರಾಯಪಟ್ಟರು.

ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ
ಸಂಬಂಧಿತ ಮಾಹಿತಿ ಹುಡುಕಿ