ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭ್ರಷ್ಟಾಚಾರದಲ್ಲಿ ರಾಜ್ಯ ನಂ.1, ಸಿಎಂಗೆ ಕೀರ್ತಿ: ಸಿದ್ದು ವ್ಯಂಗ್ಯ (BJP | Congress | JDS | Siddaramaiah | Yeddyurappa | KPCC)
Bookmark and Share Feedback Print
 
ಸ್ವಜನಪಕ್ಷಪಾತ, ಅಧಿಕಾರದಾಹದಿಂದಾಗಿ ಕರ್ನಾಟಕವನ್ನು ಭ್ರಷ್ಟಾಚಾರದಲ್ಲಿ ನಂಬರ್ 1 ಪಟ್ಟಕ್ಕೆ ಏರಿಸಿದ ಕೀರ್ತಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸಲ್ಲುತ್ತದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಘಟಕ ವಿದ್ಯಾನಗರ ಕ್ರಾಸ್ ಬಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದಿಂದ ಆಯ್ಕೆಯಾದ ಸದಸ್ಯರನ್ನು ಸನ್ಮಾನಿಸಿ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಬಿಜೆಪಿ ಮುಖಂಡರಿಗೆ ನೈತಿಕತೆ ಇದ್ದರೆ ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಆರೋಪದಲ್ಲಿ ಶಾಮೀಲಾಗಿರುವ ಯಡಿಯೂರಪ್ಪ ಅವರನ್ನು ಕೂಡಲೇ ಸಿಎಂ ಗದ್ದುಗೆಯಿಂದ ಕೆಳಗಿಳಿಸಲಿ ಎಂದು ಸವಾಲು ಹಾಕಿದರು. ಮುಖ್ಯಮಂತ್ರಿಗಳು ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಕೇಂದ್ರದ ಹಣವನ್ನೇ ಖರ್ಚು ಮಾಡುವ ಮೂಲಕ ರಾಜ್ಯ ಸರಕಾರದ ಅಭಿವೃದ್ಧಿ ಎಂದು ಬಿಂಬಿಸುತ್ತಿರುವುದಾಗಿ ದೂರಿದರು.
ಸಂಬಂಧಿತ ಮಾಹಿತಿ ಹುಡುಕಿ