ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ರಾಜ್ಯದ ಶೇ.90ರಷ್ಟು ಶಾಸಕರಿಗೆ ಜೀವ ಬೆದರಿಕೆ! (R Ashok | MLA | Life threat | Rama das | Shohba | BJP)
ರಾಜ್ಯದಲ್ಲಿ ಶೇ.90ರಷ್ಟು ಶಾಸಕರು ತಮಗೆ ಜೀವ ಬೆದರಿಕೆ ಇದೆ. ನಮಗೆ ರಕ್ಷಣೆ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆಂದು ಗೃಹ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದಲ್ಲ ಒಂದು ಕಾರಣಕ್ಕಾಗಿ ನಮಗೆ ಜೀವ ಬೆದರಿಕೆ ಇದೆ. ಹಾಗಾಗಿ ರಕ್ಷಣೆ ಕೊಡಿ ಎಂದು ಶಾಸಕರು ಕೋರಿರುವುದಾಗಿ ವಿವರಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಜೀವ ಬೆದರಿಕೆ ಬಂದಿದೆಯಲ್ಲ, ಈ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ಎಂಬ ಪ್ರಶ್ನೆಗೆ ಅವರು ಈ ಮೇಲಿನಂತೆ ಉತ್ತರಿಸಿದ್ದಾರೆ.

ಏತನ್ಮಧ್ಯೆ, ಆಸ್ಪತ್ರೆಗಳ ಮೇಲೆ ದಿಢೀರ್ ದಾಳಿ ನಡೆಸಿರುವ ವೈದ್ಯಕೀಯ ಶಿಕ್ಷಣ ಸಚಿವ ಎ.ಎಸ್.ರಾಮದಾಸ್ ಕೂಡ, ತನಗೆ ಜೀವ ಬೆದರಿಕೆ ಬಂದಿರುವುದಾಗಿ ತಿಳಿಸಿದ್ದು, ತಾನು ಯಾವುದೇ ಕಾರಣಕ್ಕೂ ಬೆದರಿಕೆಗಳಿಗೆಲ್ಲ ಜಗ್ಗುವುದಿಲ್ಲ ಎಂದು ತಿರುಗೇಟು ನೀಡಿದ್ದರು.

ಅಲ್ಲದೇ ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಸಂಪೂರ್ಣ ನಿಯಂತ್ರಣದಲ್ಲಿದೆ. ನಕ್ಸಲ್ ಪಟ್ಟಿಯಿಂದ ರಾಜ್ಯವನ್ನು ಹೊರಗಿಡಲಾಗಿದೆ. ಆದರೂ ಬೇರೆ ರಾಜ್ಯಗಳಿಗೆ ಕೇಂದ್ರ ಸರಕಾರ ಹೆಚ್ಚು ಅನುದಾನ ನೀಡುತ್ತಿದೆ. ನಮ್ಮ ರಾಜ್ಯಕ್ಕೂ ಹೆಚ್ಚಿನ ಅನುದಾನ ನೀಡಬೇಕು ಎಂದು ಸಂದರ್ಭದಲ್ಲಿ ಹೇಳಿದರು.

ಕರಾವಳಿ ಭದ್ರತೆಗೆ ವಿಶೇಷ ಗಮನ ಕೊಡಬೇಕೆಂದು ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಗಳಿಗೆ ಸೂಚನೆ ಕೊಟ್ಟಿದ್ದಾರೆ. ಈ ನಿಟ್ಟಿನಲ್ಲಿ ಕರಾವಳಿ ಪಡೆಯನ್ನು ಬಲಪಡಿಸುವ ಹಾಗೂ ಆ ಪ್ರದೇಶದಲ್ಲಿ ಕರಾವಳಿ ಪೊಲೀಸ್ ಠಾಣೆ ಸ್ಥಾಪಿಸುವ ಪ್ರಯತ್ನ ತುಂಬಾ ವೇಗವಾಗಿ ನಡೆಯುತ್ತಿದೆ ಎಂದರು.
ಇವನ್ನೂ ಓದಿ