ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ಭ್ರಷ್ಟ ಸರಕಾರದ ವಿರುದ್ಧದ ಹೋರಾಟ ನಿಲ್ಲಲ್ಲ: ಎಚ್‌ಡಿಕೆ (Kumaraswamy | Yadyurppa | Karnataka | State Politics)
ಯಾವುದೇ ಕಾರಣಕ್ಕೂ ಭ್ರಷ್ಟ ಸರಕಾರದ ವಿರುದ್ಧ ಕೈಗೊಂಡಿರುವ ಹೋರಾಟವನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ರೈತರು ದೀನದಲಿತರ ಲೂಟಿಯಲ್ಲಿ ತೊಡಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಸರಕಾರವನ್ನು ಕಿತ್ತೊಗೆಯುವ ಮೂಲಕ ರಾಜ್ಯದಲ್ಲಿ ಶಾಂತಿ, ಸಮೃದ್ಧಿಯನ್ನು ನೆಲೆಸುವುದು ನಮ್ಮ ಗುರಿ ಎಂದವರು ಸಾರಿದರು.

ಯಾವುದೇ ಕಾರಣಕ್ಕೂ ಬಿಜೆಪಿ ಜತೆ ರಾಜಿ ಮಾಡುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸಲಾಗುತ್ತಿದೆ. ಯಡ್ಡಿ ಸರಕಾರಕ್ಕೆ ಸ್ಪಷ್ಟ ಗುರಿ ಇಲ್ಲ, ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದವರು ಲೇವಡಿ ಮಾಡಿದರು.

ದೇವೇಗೌಡರ ಕುಟುಂಬದ ಬಣ್ಣ ಬಯಲು ಮಾಡುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. ಆದರೆ ಇವೆಲ್ಲವನ್ನೂ ಎದುರಿಸುವ ಧೈರ್ಯ ಹಾಗೂ ನೈತಿಕ ಶಕ್ತಿ ನಮ್ಮಲ್ಲಿದೆ ಎಂದು ಎಚ್‌ಡಿಕೆ ತಿರುಗೇಟು ನೀಡಿದರು.
ಇವನ್ನೂ ಓದಿ